Cauvery Water : ಇಂದು ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

Public TV
1 Min Read

ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ವಿಪಕ್ಷಗಳ ಸಲಹೆಯನ್ನು ಸರ್ಕಾರ ಪಡೆಯಲಿದೆ. ಸುಪ್ರೀಂಕೋರ್ಟ್,ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಹಾಗೂ ಮುಂದಿನ ಕಾನೂನು ಹೋರಾಟ ಹೇಗೆ ಎಂಬ ಬಗ್ಗೆಯೂ ಚರ್ಚೆ ಆಗಲಿದೆ.

 

ಕೂಡಲೇ ತಮಿಳುನಾಡಿಗೆ ನೀರು ಬಂದ್ ಮಾಡಿದರೆ ಎದುರಾಗುವ ಕಾನೂನು ತೊಡಕುಗಳು, ಸವಾಲುಗಳ ಬಗ್ಗೆ ವಕೀಲರ ಅಭಿಪ್ರಾಯವನ್ನು ಸಿಎಂ ಆಲಿಸಲಿದ್ದಾರೆ.  ಇದನ್ನೂ ಓದಿ: Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು

ಪ್ರತಿಪಕ್ಷಗಳ ಸಲಹೆ ಮೇರೆಗೆ ಮುಂದಿನ ಹೆಜ್ಜೆ ಇಡಲು ಸರ್ಕಾರ ನಿರ್ಧರಿಸಿದೆ. ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್‌ ನೀರು ಹರಿಸಲಾಗುತ್ತದೆ. ಆಗಸ್ಟ್ 31 ರವರೆಗೂ ನಿತ್ಯ 10,000 ಕ್ಯೂಸೆಕ್ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 21 ಟಿಎಂಸಿಗಿಂತಲೂ ಹೆಚ್ಚು ನೀರು ತಮಿಳುನಾಡಿಗೆ ಬಿಡಲಾಗಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್