ರಾಮನಗರಕ್ಕೆ 3 ದಿನ, ಚನ್ನಪಟ್ಟಣಕ್ಕೆ 2 ದಿನ ಕಾವೇರಿ ನೀರು ಬಂದ್

Public TV
1 Min Read

ರಾಮನಗರ: ಜಿಲ್ಲೆಯ ರಾಮನಗರ ನಗರ ಪ್ರದೇಶ ಹಾಗೂ ಚನ್ನಪಟ್ಟಣ ನಗರ ಪ್ರದೇಶಕ್ಕೆ ಕ್ರಮವಾಗಿ ಮೂರು ಹಾಗೂ ಎರಡು ದಿನಗಳ ಕಾಲ ಕಾವೇರಿ ನೀರು ಸರಬರಾಜು ಮಾಡುವುದನ್ನು ಬಂದ್ ಮಾಡಿ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ.

ರಾಮನಗರ ಹಾಗೂ ಚನ್ನಪಟ್ಟಣ ನಗರಗಳಿಗೆ ಹಲಗೂರು ಸಮೀಪದ ತೊರೆಕಾಡನಹಳ್ಳಿಯಿಂದ ಕಾವೇರಿ ನೀರನ್ನು ಕುಡಿಯುವುದಕ್ಕಾಗಿ ಪ್ರತಿನಿತ್ಯ ಸರಬರಾಜು ಮಾಡಲಾಗುತ್ತಿದೆ. ಆದರೆ ಇದೀಗ ನೀರು ಸರಬರಾಜು ಮಾಡುವ ಮಾರ್ಗದ ಪೈಪ್ ಲೈನ್‍ನಲ್ಲಿ ದೋಷ ಕಾಣಿಸಿಕೊಂಡಿರುವ ಪರಿಣಾಮ ಕಾವೇರಿ ನೀರು ಸರಬರಾಜು ಮಾಡದಂತೆ ತಡೆಯಲಾಗಿದೆ.

ತೊರೆಕಾಡನಹಳ್ಳಿಯ ಬಿಡಬ್ಲ್ಯೂಎಸ್‍ಎಸ್‍ಬಿ ಆವರಣದ ಹತ್ತಿರ ಕುಡಿಯುವ ನೀರು ಸರಬರಾಜು ಮಾಡುವ 600 ಮಿಮಿ ವ್ಯಾಸದ ಪಿಎಸ್ಪಿ ಏರು ಕೊಳವೆಯ ಮಾರ್ಗದಲ್ಲಿ ಅಧಿಕವಾಗಿ ನೀರು ಸೋರಿಕೆಯಾಗುತ್ತಿದೆ. ಇದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದುರಸ್ಥಿ ಕಾರ್ಯ ಮಾಡಬೇಕಾಗಿದೆ

ಹಾಗಾಗಿ ಇದೇ ಡಿಸೆಂಬರ್ 11 ಹಾಗೂ 12ರಂದು ಎರಡು ದಿನಗಳ ಕಾಲ ಚನ್ನಪಟ್ಟಣ ನಗರ ಪ್ರದೇಶಕ್ಕೆ ಹಾಗೂ ಡಿಸೆಂಬರ್ 11, 12, 13ರಂದು ಮೂರು ದಿನಗಳ ಕಾಲ ರಾಮನಗರ ನಗರ ಪ್ರದೇಶಗಳಿಗೆ ನೀರು ಸರಬರಾಜು ಮಾಡದಿರಲು ನಿರ್ಧರಿಸಲಾಗಿದೆ.

ಈಗಾಗಲೇ 5 ದಿನಗಳಿಗೊಮ್ಮೆ ಇಲ್ಲವೇ ವಾರಕ್ಕೊಮ್ಮೆ, 10 ಕಾವೇರಿ ನೀರನ್ನು ರಾಮನಗರದಲ್ಲಿ ಸರಬರಾಜು ಮಾಡುತ್ತಿದ್ದರೆ, ಚನ್ನಪಟ್ಟಣದಲ್ಲಿ ಎರಡು- ಮೂರು ದಿನಗಳಿಗೊಮ್ಮೆ ಸರಬರಾಜು ಮಾಡಲಾಗುತ್ತಿದೆ. ಇದೀಗ ಪೈಪ್ ಲೈನ್ ದುರಸ್ಥಿಯಿಂದ ಸಾರ್ವಜನಿಕರು ಕುಡಿಯುವ ನೀರಿಗೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *