ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

Public TV
1 Min Read

ನವದೆಹಲಿ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಇಂದು ಡಿಕೆ ಶಿವಕುಮಾರ್ ಮಾಲೀಕತ್ವದ ದೆಹಲಿಯ ಸಫ್ದರ್ ಜಂಗ್ ಎನ್‍ಕ್ಲೇವ್ ಬಿ-4/17 ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮುಗಿದಿದ್ದು, ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ದೊರೆತು ಹೊರ ಬಂದ್ರೆ ಸಿಬಿಐ ಅವರನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಜಾಮೀನು ಅರ್ಜಿ ತಿರಸ್ಕೃತಗೊಂಡು ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿಯೇ ಉಳಿದ್ರೆ, ಸಿಬಿಐ ಬಾಡಿ ವಾರೆಂಟ್ ಮೂಲಕ ಡಿಕೆಶಿಯವರನ್ನು ವಶಕ್ಕೆ ಪಡೆಯಬಹುದಾಗಿದೆ.

ಇಡಿ ಕೇಸ್ ನಿಂದ ಪಾರಾದ್ರೆ ಡಿಕೆ ಶಿವಕುಮಾರ್, ಸಿಬಿಐ ಚಕ್ರವ್ಯೂಹದಲ್ಲಿ ಸಿಲುಕುವ ಸಾಧ್ಯತೆಗಳಿವೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *