ಆಕ್ಟಿವಾಗೆ ಟಿಪ್ಪರ್ ಲಾರಿ ಡಿಕ್ಕಿ: ಭಯಾನಕ ಅಪಘಾತದಿಂದ ಇಬ್ಬರು ಪಾರು

Public TV
1 Min Read

ಚಿಕ್ಕಬಳ್ಳಾಪುರ: ಆಕ್ಟಿವಾ ಹೋಂಡಾ ಬೈಕಿಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಭೀಕರ ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಈ ಅಪಘಾತ ನಡೆದಿದೆ. ಇದು ಒಂದು ವಾರದ ಹಿಂದೆ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯ ಹೆದ್ದಾರಿ ಬದಿಯ ಹೋಟೆಲ್‍ವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆಕ್ಟಿವಾ ಹೋಂಡಾ ಬೈಕ್ ನಲ್ಲಿದ್ದ ಸವಾರ ನೋಡದೇ ಬಲಗಡೆಗೆ ಗಾಡಿಯನ್ನು ತಿರುಗಿಸಿದ್ದಾನೆ. ಈ ವೇಳೆ ಅತಿ ವೇಗದಿಂದ ಬರುತ್ತಿದ್ದ ಟಿಪ್ಪರ್ ಲಾರಿ ಬಂದು ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿ ಹೊಡೆದ ರಭಸಕ್ಕೆ ಆಕ್ಟಿವಾ ಹೋಂಡಾ ನೆಲಕ್ಕುರುಳಿ ಬಿದ್ದು ಸವಾರನಿಗೆ ತೀವ್ರವಾದ ಗಾಯಗಳಾಗಿದೆ. ಅದೇ ಆಕ್ಟಿವಾ ಹೋಂಡಾದ ಹಿಂಬದಿ ಕುಳಿತಿದ್ದ ಮಹಿಳೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.

ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಅಂತ ತಿಳಿದುಬಂದಿದೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article
Leave a Comment

Leave a Reply

Your email address will not be published. Required fields are marked *