ಕೇಕ್ ಬದಲಿಗೆ ಹಣ್ಣು, ತರಕಾರಿ ಕತ್ತರಿಸಿ ಹೊಸ ವರ್ಷಾಚರಣೆ

1 Min Read

ಯಾದಗಿರಿ: ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯನ್ನು ಕೇಕ್ ಬದಲಿಗೆ ರೈತರು ಬೆಳೆದ ಹಣ್ಣು, ತರಕಾರಿ ಕತ್ತರಿಸಿ ವಿಭಿನ್ನವಾಗಿ ಆಚರಿಸಿದ್ದಾರೆ.

ಶ್ರೀ ಹನುಮಾನ್ ಟ್ರಸ್ಟ್‌ನಿಂದ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ದಿನ ಮುಂಚಿತವಾಗಿ ಹೊಸ ವರ್ಷವನ್ನು ಆಚರಿಸುತ್ತಿದ್ದಾರೆ. ಎಣ್ಣೆ ಪಾರ್ಟಿ, ಪ್ರಾಣಿ ಬಲಿಯಂತಹ ದುಷ್ಕೃತ್ಯಕ್ಕೆ ಬಾಯ್ ಹೇಳಿ, ಈ ರೀತಿ ರೈತರು ಬೆಳೆದ ಹಣ್ಣು, ತರಕಾರಿ ಕತ್ತರಿಸಿ ಆಚರಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯ ಕಲಾವಿದೆ ಪ್ರೊ.ಎಂ.ಜೆ ಕಮಲಾಕ್ಷಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ನ್ಯೂ ಇಯರ್ ಸೆಲೆಬ್ರೇಷನ್ ಹೆಸರಲ್ಲಿ ಯುವಕರು ದುಷ್ಚಟಕ್ಕೆ ದಾಸರಾಗುತ್ತಾರೆ. ಹೀಗಾಗಿ ಮದ್ಯಕ್ಕೆ ಬಾಯ್ ಹೇಳಿ, ಕಬ್ಬಿನ ಹಾಲು ಕುಡಿದು ಆಚರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಚಿಕನ್, ಮಟನ್ ಬದಲಿಗೆ ತರಕಾರಿ, ಹಣ್ಣು ಸೇವಿಸುವಂತೆ ಕೇಳಿಕೊಂಡಿದ್ದಾರೆ.

Share This Article