ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ಪಲ್ಟಿ- ಡ್ರೈವರ್ ಗ್ರೇಟ್ ಎಸ್ಕೇಪ್

Public TV
1 Min Read

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿಯೊಮದು ಪಲ್ಟಿ ಹೊಡೆದ ಘಟನೆ ಸೋಮವಾರಪೇಟೆ ತಾಲೂಕಿನ ಶಾನಿವಾರಸಂತೆ ಸಮೀಪದ ಗುಡುಗಳಲೆ ರಸ್ತೆ ತಿರುವಿನಲ್ಲಿ ನಡೆದಿದೆ.

ಸಿಮೆಂಟ್ ಲಾರಿ ಆಂಧ್ರ ಪ್ರದೇಶದಿಂದ ಕೊಡಗಿನ ಸೋಮವಾರಪೇಟೆ ಕಡೆಗೆ ಹೊರಟಿತ್ತು. ಆಂಧ್ರ ಪ್ರದೇಶ ಮೂಲದ ಇಮ್ತಾಸ್ ಎಂಬವರು ಲಾರಿ ಚಾಲನೆ ಮಾಡುತ್ತಿದ್ದರು. ಹೀಗೆ ಇಂದು ಬೆಳಗ್ಗೆ ಹಾಸನ ಜಿಲ್ಲೆಯ ಅರಕಲಗೂಡು ಮಾರ್ಗದಿಂದ ಶನಿವಾರಸಂತೆಗೆ ಅಗಮಿಸುತ್ತಿರುವ ಸಂದರ್ಭ ರಸ್ತೆ ತಿರುವಿನಲ್ಲಿ ಬೃಹದಾಕಾರದ ಗುಂಡಿ ಇದ್ದ ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಸ್ಥಳದಲ್ಲೇ ಪಲ್ಟಿಯಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ದೊಡ್ಡವರ ಮಕ್ಕಳ ಆಕ್ಸಿಡೆಂಟ್ – Textile ಮಾಲೀಕನ ಮಗನ ಕಾರು ಅಪಘಾತ

ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಸಿನಿಮಿಯ ರೀತಿಯಲ್ಲಿ ಲಾರಿಯಿಂದ ಯಾವುದೇ ಪ್ರಾಣಾಪಾಯ ಇಲ್ಲದೇ ಹೊರಬಂದಿದ್ದಾರೆ. ಸುಮಾರು 600 ಸಿಮೆಂಟ್ ಚೀಲಗಳನ್ನು ಲಾರಿ ಹೊತ್ತು ಬರುತ್ತಿತ್ತು ಎನ್ನಲಾಗಿದೆ. ಶನಿವಾರಸಂತೆ ಗುಡುಗಳಲೆ ರಸ್ತೆ ತಿರುವಿನಲ್ಲಿ ಆಗಿಂದಾಗ್ಗೆ ಈ ರೀತಿಯ ಅವಘಡಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಯಾವುದೇ ಸ್ಥಾನಮಾನ ಇಲ್ಲದಿದ್ರೂ ಕೊನೇ ಉಸಿರಿರುವವರೆಗೆ ಪಕ್ಷ ಸಂಘಟನೆ ಮಾಡ್ತೇನೆ: ಬಿಎಸ್‍ವೈ

 

Share This Article
Leave a Comment

Leave a Reply

Your email address will not be published. Required fields are marked *