ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

Public TV
2 Min Read

ಆನೇಕಲ್: ದೇಶದಲ್ಲೆ ಮೊಟ್ಟಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾದ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಬೈಯಪ್ಪನಹಳ್ಳಿ ನೂತನ ರೈಲ್ವೆ ನಿಲ್ದಾಣದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರೈಲ್ವೆ ಯಾರ್ಡ್ ನ ಕಾರ್ಯಕಾರಿ ಅಂಶಗಳು, ಸೌಲಭ್ಯಗಳು ಮತ್ತು ನಿಲ್ದಾಣದಲ್ಲಿ ಒದಗಿಸಲಾದ ನವೀನ ವೈಶಿಷ್ಟ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆಗೂ ಮುನ್ನ ಸಚಿವರಿಗೆ ರೈಲ್ವೆ ಪೊಲೀಸರಿಂದ ಗೌರವ ಗೌರವ ವಂದನೆ ಅರ್ಪಿಸಲಾಯಿತು.

ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ನೇತೃತ್ವದ ಎಸ್‍ಡಬ್ಲ್ಯೂಆರ್‍ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಈ ಟರ್ಮಿನಲ್ ನಿಂದ ಪಾರ್ಸೆಲ್ ಸಾಗಿಸುವ ಸಾಮರ್ಥ್ಯದ ಕುರಿತು ಚರ್ಚಿಸಿದರು. ನಿಲ್ದಾಣ ನಿರ್ಮಾಣವನ್ನು ನೋಡಿ ತುಂಬಾನೆ ಸಂತೋಷ ವ್ಯಕ್ತಪಡಿಸಿದ ಸಚಿವರು ಟರ್ಮಿನಲ್ ನ ಇಂಚಿಂಚೂ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದರು. ನಂತರ ಮಾತನಾಡಿದ ಸಚಿವರು, ಈ ಪ್ರದೇಶದಲ್ಲಿ ತಯಾರಿಸಿದ ಬಿಳಿ ಸರಕುಗಳು, ಕೈಗಾರಿಕಾ ಉಪಕರಣಗಳು, ಜವಳಿ ಮತ್ತು ಇತರ ಉತ್ಪನ್ನಗಳನ್ನು ಸಾಗಿಸಲು ಪಾರ್ಸೆಲ್ ವಿಶೇಷ ರೈಲುಗಳ ಓಡಾಟದಿಂದ ಆದಾಯವನ್ನು ಗಳಿಸಲು ಪ್ರಸ್ತಾಪಗಳನ್ನು ರೂಪಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

ಈ ವಿಮಾನ ನಿಲ್ದಾಣ ರೀತಿಯಲ್ಲಿ ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ಎಂಜಿನಿಯರ್‍ಗಳ ತಂಡವನ್ನು ವೈಷ್ಣವ್ ಶ್ಲಾಘಿಸಿದರು. ಸರ್ ಎಂವಿ ಟರ್ಮಿನಲ್‍ನಲ್ಲಿ ಪ್ರಯಾಣಿಕರ ಸೌಕರ್ಯ ಮತ್ತು ಸೌಕರ್ಯವನ್ನು ಹೆಚ್ಚಿಸಲು ಒದಗಿಸಲಾದ ಸೌಲಭ್ಯಗಳು ಮತ್ತು ಸೌಕರ್ಯಗಳು ಭವಿಷ್ಯದಲ್ಲಿ ದೇಶದಾದ್ಯಂತ ನಿರ್ಮಾಣಗೊಳ್ಳುವ ನಿಲ್ದಾಣಗಳಿಗೆ ಮಾನದಂಡವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

ಇಡೀ ದೇಶಕ್ಕೆ ಮಾದರಿಯಾದ ನಿಲ್ದಾಣ:
ಈ ನಿಲ್ದಾಣವು 7 ಪ್ಲಾಟ್‍ಫಾರ್ಮ್‍ಗಳನ್ನು ಹೊಂದಿದ್ದು, ದಿನಕ್ಕೆ 1 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಸಾಮಥ್ರ್ಯವನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಎಸ್ಕಲೇಟರ್‍ಗಳು ಮತ್ತು ಲಿಫ್ಟ್‍ಗಳನ್ನು ಹೊರತುಪಡಿಸಿ ಸಬ್‍ವೇಗೆ ಪ್ರವೇಶಿಸಲು ಬ್ರೈಲ್ ಚಿಹ್ನೆಗಳು, ಅಂಡರ್ ಪಾಸ್ ಗಳ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ದಿವ್ಯಾಂಗ(ಅಂಗವಿಕಲರ) ಸ್ನೇಹಿ ನಿಲ್ದಾಣವಾಗಿದೆ. ನಿಲ್ದಾಣದಲ್ಲಿ ಪರಿಸರ ಸ್ನೇಹಿ ನೀರಿನ ಮರುಬಳಕೆ ಘಟಕವೂ ಇದೆ. ಬಿಬಿಎಂಪಿಯೊಂದಿಗೆ ಸಮಾಲೋಚಿಸಿ ಟರ್ಮಿನಲ್‍ಗೆ ಪ್ರವೇಶಕ್ಕೆ ಕಿರಿದಾದ ರಸ್ತೆಗಳ ಪ್ರವೇಶದ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಶೀಘ್ರದಲ್ಲೇ ನಿಲ್ದಾಣ ಉದ್ಘಾಟನೆ ಆಗಲಿದೆ ಎಂದು ಸಚಿವರು ಹೇಳಿದರು.

ಇದೇ ಸಂದರ್ಭದಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆಗೆ ಸಚಿವ ಜೊತೆಗೆ ಸಂಸದ ಪಿ.ಸಿ.ಮೋಹನ್, ಜನರಲ್ ಮ್ಯಾನೇಜರ್ ಎಸ್ ಡಬ್ಲ್ಯುಆರ್ ಸಂಜೀವ್ ಕಿಶೋರ್, ಪ್ರಿನ್ಸಿಪಾಲ್ ಚೀಫ್ ಆಪರೇಷನ್ ಮ್ಯಾನೇಜರ್ ಹರಿ ಶಂಕರ್ ವರ್ಮಾ, ಡಿ ಆರ್ ಎಂ ಬೆಂಗಳೂರು ಶ್ಯಾಮ್ ಸಿಂಗ್, ಮುಖ್ಯ ಆಡಳಿತಾಧಿಕಾರಿ, ನಿರ್ಮಾಣ ದೇಶ್ ರತನ್ ಗುಪ್ತಾ, ಮತ್ತು ರೈಲ್ವೇಸ್ ನ ಹಿರಿಯ ಅಧಿಕಾರಿಗಳು ಭಾಸ್ಕರ್ ರಾವ್, ಮುಖ್ಯ ಆಯುಕ್ತ ಬಿಬಿಎಂಪಿ ಗೌರವ್ ಗುಪ್ತಾ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *