ಅದು ನಾಡಬಂದೂಕು ಅಲ್ಲ – ಬೆಂಬಲಿಗರ ನಡೆ ಸಮರ್ಥಿಸಿಕೊಂಡ ಸಚಿವ ಭಗವಂತ ಖೂಬಾ

Public TV
1 Min Read

ಯಾದಗಿರಿ: ನಾಡಬಂದೂಕು ಸಿಡಿಸಿ ಸ್ವಾಗತ ಕೋರಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಬೆಂಬಲಿಗರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅದನ್ನು ನೋಡಿಲ್ಲ. ಅಲ್ಲಿ ನಾಡ ಬಂದೂಕು ಇರಲಿಲ್ಲ. ಈ ಭಾಗದಲ್ಲಿ ಹಳೆಯ ವ್ಯವಸ್ಥೆ ಇದೆ. ಇತಿಹಾಸ ತೆಗೆದು ಒಂದು ಸಲ ನೋಡಿ. ಪಟಾಕಿ ಪುಡಿ ಹಾಕಿ ಶಬ್ದ ಮಾಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ಗುಂಡು ಹಾರಿಸಿಲ್ಲ ಅದನ್ನು ತಿರುಚಬೇಡಿ. ಗುಂಡು ಹಾರಿಸಿದ್ದರೆ ಖುದ್ದು ನಾವೇ ಕರೆಸಿ ಮಾತನಾಡ್ತೀದ್ದೀವಿ. ತಪ್ಪು ಮಾಡಿದ್ರೆ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೆ. ಅದೊಂದು ವಾಡಿಕೆ ಇದೆ. ದೇವರ ದಯೆಯಿಂದ ಯಾವುದೇ ಅವಘಡ ಆಗಿಲ್ಲ. ಇದು ಸತ್ಯಕ್ಕೆ ದೂರವಾದದ್ದು, ಅದು ನಾಡಬಂದೂಕು ಅಲ್ಲ ಎಂದು ಮತ್ತೆ ಮತ್ತೆ ಹೇಳಿದರು. ಇದನ್ನೂ ಓದಿ: ತಾಲಿಬಾನಿಗಳಿಗಿಂತ ಭಾರತದಲ್ಲಿರೋ ಅವರ ಬೆಂಬಲಿಗರು ಬಹಳ ಡೇಂಜರ್: ಸೂಲಿಬೆಲೆ

ಏನಿದು ಘಟನೆ..?
ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆಯುತ್ತಿದ್ದ ಜನಾರ್ಶೀವಾದ ಕಾರ್ಯಕ್ರಮಕ್ಕೆ ಖೂಬಾ ಆಗಮಿಸಿದ್ದರು. ಈ ವೇಳೆ ಅವರ ಸ್ವಾಗತಕ್ಕೆ ಜನ ನಾಡಬಂದೂಕು ಸಿಡಿಸಿ ಭರ್ಜರಿಯಾಗಿ ಸ್ವಾಗತ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಯರಗೋಳ ಗ್ರಾಮದಲ್ಲಿ ಜನ ಕೇಂದ್ರ ಸಚಿವ ಭಗವಂತ ಖೂಬಾ ಆಗಮನ ಮಾಡುತ್ತಿದ್ದಂತೆ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಪುಷ್ಪವನ್ನು ಅರ್ಪಿಸಿ ಭರ್ಜರಿ ಸ್ವಾಗತ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *