ತೈಲ ಬೆಲೆ ಕಡಿತಗೊಳಿಸಲು ಶೀಘ್ರವೇ ಕೇಂದ್ರದಿಂದ ಕ್ರಮ – ಅಮಿತ್ ಶಾ

Public TV
1 Min Read

ಹೈದರಾಬಾದ್: ದೇಶ್ಯಾದಂತ ತೀವ್ರಗತಿಯಲ್ಲಿ ಹೆಚ್ಚಾಳವಾಗುತ್ತಿರುವ ತೈಲಬೆಲೆ ಕಡಿಮೆಗೊಳಿಸಲು ಕೇಂದ್ರದ ಕ್ರಿಯಾ ಯೋಜನೆ ಶೀಘ್ರವೇ ಜಾರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಶನಿವಾರ ದೆಹಲಿಯಲ್ಲಿ ಹೇಳಿದ್ದಾರೆ.

ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುತ್ತಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು. ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹೈದರಾಬಾದ್‍ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿ ಇಂಧನ ಬೆಲೆ ಏರಿಕೆ ಕುರಿತು ಪ್ರಸ್ತಾಪಿಸಿದರು. ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಯುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಜನರ ಆಂತಕವನ್ನು ನಾವು ತಿಳಿದಿದ್ದೇವೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕ್ರಿಯಾ ಯೋಜನೆ ಹೊರತಂದು ಬೆಲೆ ಏರಿಕೆಗೆ ಕಡಿವಾಣ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಅವಧಿ ಮುನ್ನ ವಿಧಾನಸಭೆ ಮಾಡಿದ ಕುರಿತು ಸಿಎಂ ಕೆಸಿಆರ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಅವಧಿ ಮೊದಲೇ ವಿಧಾನಸಭೆಯನ್ನು ಏಕೆ ವಿಸರ್ಜನೆ ಮಾಡಿದ್ದಾರೆ ಎಂಬುವುದನ್ನು ಕೆಸಿಆರ್ ಜನರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸಿದರು.

ಮೊದಲು `ಒಂದೇ ದೇಶ.. ಒಂದೇ ಚುನಾವಣೆ’ಗೆ ಓಕೆ ಎಂದಿದ್ದ ಕೆಸಿಆರ್ ನಂತರ ಮಾತು ಬದಲಿಸದ್ದೇಕೆ? ಪದೇ ಪದೇ ಚುನಾವಣೆ ನಡೆದರೆ ಸಣ್ಣ ರಾಜ್ಯಗಳಿಗೆ ಆರ್ಥಿಕ ಹೊರೆ ಆಗಲ್ವಾ ಎಂದು ಪ್ರಶ್ನಿಸಿದರು. ಅಲ್ಲದೇ ನಿಮಗೆ ರಜಾಕಾರರ ಆಡಳಿತ ಬೇಕೋ, ಬಿಜೆಪಿ ಆಡಳಿತ ಬೇಕೋ? ಎಂದು ಜನರು ಚಿಂತನೆ ನಡೆಸಲಿ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *