ಕೇಂದ್ರವು ಅಧಿಕ ತೆರಿಗೆ ಸಂಗ್ರಹಕ್ಕೆ ಒತ್ತು ಕೊಡ್ತಿದೆಯೇ ಹೊರತು ಜನರ ನೋವಿಗೆ ಸ್ಪಂದಿಸ್ತಿಲ್ಲ: ರಾಹುಲ್ ಗಾಂಧಿ

Public TV
1 Min Read

ನವದೆಹಲಿ: ಕೇಂದ್ರವು ಅಧಿಕ ತೆರಿಗೆ ಸಂಗ್ರಹಕ್ಕೆ ಒತ್ತು ಕೊಡುತ್ತಿದೆಯೇ ಹೊರತು ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ನಾಳೆ ಬಜೆಟ್ ಅಧಿವೇಶನದ ಹಿನ್ನೆಲೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಆರ್ಥಿಕ ಸಮೀಕ್ಷೆ 2021-22 ಅನ್ನು ಮಂಡಿಸಿದರು. ಇದಕ್ಕೆ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ದೇಶದ ಜನರು ತೆರಿಗೆ ಹೊರೆಯಿಂದ ತೊಂದರೆಗೀಡಾಗಿದ್ದಾರೆ. ಆದರೆ ಮೋದಿ ಸರ್ಕಾರಕ್ಕೆ ತೆರಿಗೆ ಗಳಿಕೆಯೇ ದೊಡ್ಡ ಸಾಧನೆಯಾಗಿದೆ. ಅವರು ತಮ್ಮ ಸಂಪತ್ತನ್ನು ಮಾತ್ರ ನೋಡುತ್ತಾರೆ. ಜನರ ನೋವನ್ನು ನೋಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Economic Survey 2022: ಹೊಸ ಹಣಕಾಸು ವರ್ಷಕ್ಕೆ ಶೇ.8-8.5 ಬೆಳವಣಿಗೆ ನಿರೀಕ್ಷೆ

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಸಂಸತ್‍ನಲ್ಲಿ ಮಂಗಳವಾರ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿಯನ್ನು ಇಂದು ಮಂಡಿಸಿದರು. 2022-23ರ ಆರ್ಥಿಕ ವರ್ಷದಲ್ಲಿ ದೇಶವು ಶೇ.8 ರಿಂದ ಶೇ.8.5ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.9.2ರಷ್ಟು ಆರ್ಥಿಕ ಬೆಳವಣಿಗೆ ಅಂದಾಜಿಸಲಾಗಿದೆ. ಆದರೆ ಮುಂದಿನ ವರ್ಷದ ಆರ್ಥಿಕ ಬೆಳವಣಿಗೆ ಪ್ರಮಾಣ ಇದಕ್ಕಿಂತ ಕಡಿಮೆಯಾಗಲಿದೆ. ‘ಫ್ರೇಜಿಲ್ ಫೈವ್’ ರಾಷ್ಟ್ರಗಳಿಂದ ಭಾರತವು 4ನೇ ಅತಿದೊಡ್ಡ ವಿದೇಶಿ ವಿನಿಮಯ ಮೀಸಲು ಸ್ಥಾನಕ್ಕೆ ಬಂದಿದೆ. ಇದು ತಂತ್ರಗಾರಿಕೆಗೆ ನೀತಿ ಅವಕಾಶವನ್ನು ನೀಡುತ್ತದೆ ಎಂದು ವರದಿಯಲ್ಲಿದೆ. ಪರಿಣಾಮ ರಾಹುಲ್ ಗಾಂಧಿ ಅವರು, ನಿಮಗೆ ಆರ್ಥಿಕ ಅಭಿವೃದ್ಧಿಯಷ್ಟೆ ಮುಖ್ಯ, ಜನರ ಕಷ್ಟವಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಟೋಯಿಂಗ್ ವಾಹನ ಸಿಬ್ಬಂದಿ ಅಮಾನುಷವಾಗಿ ವರ್ತಿಸಿಲ್ಲ, ಅದೆಲ್ಲಾ ಸುಳ್ಳು: ಆರಗ ಜ್ಞಾನೇಂದ್ರ

Share This Article
Leave a Comment

Leave a Reply

Your email address will not be published. Required fields are marked *