ಕೇಂದ್ರವು ಧ್ವನಿವರ್ಧಕಗಳ ಬಗ್ಗೆ ನೀತಿಯನ್ನು ತರಬೇಕು: ಮಹಾರಾಷ್ಟ್ರ ಗೃಹ ಸಚಿವ

Public TV
1 Min Read

ಮುಂಬೈ: ಕೇಂದ್ರ ಸರ್ಕಾರವು ಧ್ವನಿವರ್ಧಕಗಳ ಬಳಕೆಯ ಬಗ್ಗೆ ನೀತಿಯನ್ನು ಹೊರತರಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಶುಕ್ರವಾರ ಆಗ್ರಹ ಮಾಡಿದರು.

ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿರುವ ಧ್ವನಿವರ್ಧಕಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಗದ್ದಲದ ನಡುವೆ ಶಾಂತಿ ಕಾಪಾಡುವಲ್ಲಿ ರಾಜ್ಯ ಸರ್ಕಾರದೊಂದಿಗೆ ಸಹಕರಿಸಿದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಇದನ್ನೂ ಓದಿ: ಎನ್‍ಕೌಂಟರ್‌ನಲ್ಲಿ ಮೂರು ಭಯೋತ್ಪಾದಕರ ಪೈಕಿ ಒಬ್ಬ ಬದುಕುಳಿದ 

loudspeakers

ಕೇಂದ್ರವು ಇಡೀ ದೇಶಕ್ಕೆ ಧ್ವನಿವರ್ಧಕಗಳ ಮೇಲೆ ನೀತಿಯನ್ನು ತರಬೇಕು. ಆದರೆ ನಾನು ಮುಸ್ಲಿಂ ಮತ್ತು ಹಿಂದೂ ಸಮುದಾಯಗಳಿಗೆ ಧನ್ಯವಾದ ಹೇಳುತ್ತೇನೆ. ಈ ಸಮಸ್ಯೆಯನ್ನು ಎರಡು ಧರ್ಮದವರು ಶಾಂತಿಯುತವಾಗಿ ನಿಭಾಯಿಸುತ್ತಿದ್ದಾರೆ. ಅವರ ಸಹಕಾರದಿಂದಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

mosque-loudspeakers

ಕಾಮೆಂಟ್‍ಗಳನ್ನು ಮಾಡಲು ನ್ಯಾಯಾಲಯಗಳಿಗೆ ಹಕ್ಕಿದೆ. ಆದರೆ ಯಾವುದೇ ಅಪರಾಧವನ್ನು ದಾಖಲಿಸುವಾಗ ಪೊಲೀಸರು ಎಲ್ಲವನ್ನೂ ಅಧ್ಯಯನ ಮಾಡುತ್ತಾರೆ. ಅವರು ಇನ್ನೂ ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ಪಡೆದಿಲ್ಲ. ನಿರ್ಧಾರವನ್ನು ಅಧ್ಯಯನ ಮಾಡಿದ ನಂತರ ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಇದನ್ನೂ ಓದಿ: ವಿದ್ಯುತ್ ಅವಘಡ: ಮಕ್ಕಳನ್ನು ಉಳಿಸಲು ಹೋಗಿ ತಾಯಿಯೂ ಬಲಿ – ಒಂದೇ ಮನೆಯಲ್ಲಿ 3 ಸಾವು

Share This Article
Leave a Comment

Leave a Reply

Your email address will not be published. Required fields are marked *