ಜಮ್ಮು-ಕಾಶ್ಮೀರದಲ್ಲಿ 1,800 CRPF ಸೈನಿಕರನ್ನು ನಿಯೋಜಿಸಲು ಮುಂದಾದ ಸರ್ಕಾರ

Public TV
2 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ ಜಿಲ್ಲೆಯಲ್ಲಿ (Rajouri District) ಹಿಂದೂ ಕುಟುಂಬಗಳ (Hindu Families) ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ.

ಕಳೆದ ಎರಡು ವಾರಗಳ ಅವಧಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಿಂದ (Terror Attacks) ರಾಜೌರಿಗೆ ಜಿಲ್ಲೆಗೆ CRPF ನ (ಕೇಂದ್ರ ಮೀಸಲು ಪೊಲೀಸ್ ಪಡೆ) 1,800 ಸಿಬ್ಬಂದಿ ನಿಯೋಜಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ಇನ್ನೊಂದು ಆಘಾತ – ಸ್ನೇಹ ಕೊನೆಗೊಳಿಸಲು ಬಯಸಿದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ

ಕಳೆದ ಮೂರು ದಿನಗಳಿಂದಲೂ ರಜೌರಿಯಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಿಸಿದ್ದು, ಶೋಧ ಮುಂದುವರಿದಿದೆ. ಭಾನುವಾರ ಭಯೋತ್ಪಾದಕ ದಾಳಿಯ ನಂತರ ಸೇನೆ, ಪೊಲೀಸರೊಂದಿಗೆ CRPF ತುಕಡಿಗಳು ಕಾರ್ಯಾಚರಣೆ ಆರಂಭಿಸಿವೆ. CRPF ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಅಸ್ತಿತ್ವವ ಹೊಂದಿದೆ. ಇದರೊಂದಿಗೆ ಸಿಆರ್‌ಪಿಎಫ್‌ನ ಒಟ್ಟು ಬಲದ ಮೂರನೇ ಒಂದು ಭಾಗದಷ್ಟು 70ಕ್ಕೂ ಹೆಚ್ಚು ಬೆಟಾಲಿಯನ್‌ಗಳನ್ನು ಕೇಂದ್ರಾಡಳಿತ ಪ್ರದೇಶದಲ್ಲಿ ನಿಯೋಜಿಸಲಾಗಿದೆ.

2ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: 6 ಮಂದಿಯನ್ನು ಬಲಿಪಡೆದು 11 ಮಂದಿಯನ್ನು ಗಾಯಾಳುಗಳನ್ನಾಗಿ ಮಾಡಿದ ರಜೌರಿಯ ಅವಳಿ ಭಯೋತ್ಪಾದನಾ ದಾಳಿಯ ವಿರುದ್ಧ ಪೂಂಛ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಈ ದಾಳಿಯ ವಿರುದ್ಧ ಇಡೀ ಜಮ್ಮುವಿನಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: 1,337 ಕೋಟಿ ಪೈಕಿ ಶೇ.10 ರಷ್ಟು ದಂಡವನ್ನು ಠೇವಣಿ ಇಡಿ – ಗೂಗಲ್‌ಗೆ NCALT ಆದೇಶ

ಪ್ರತಿಭಟನೆ ವೇಳೆ ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು, ಅಲ್ಪಸಂಖ್ಯಾತರಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಇದೇ ವೇಳೆ, ಪಾಕಿಸ್ತಾನದ ಪ್ರತಿಕೃತಿಯನ್ನು ದಹಿಸಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *