ಚೈತ್ರಾ ಗುರಿ ಮಾಡಿ ಯಾರೋ ದುಡ್ಡು ತಿಂದಿದ್ದಾರೆ: ತಾಯಿ ರೋಹಿಣಿ

Public TV
1 Min Read

ಉಡುಪಿ: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapur) ಹಾಗೂ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ. ಆದರೆ ಚೈತ್ರಾಳನ್ನು ಯಾರೋ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಅವಳನ್ನು ಗುರಿ ಮಾಡಿಕೊಂಡು ಯಾರೋ ದುಡ್ಡು ತಿಂದಿದ್ದಾರೆ ಎಂದು ಆಕೆಯ ತಾಯಿ ರೋಹಿಣಿ (Rohini) ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಅವರು, ಚೈತ್ರಾ ನಮ್ಮ ಜೊತೆ ಬಹಳ ಪ್ರೀತಿಯಿಂದ ಇದ್ದಳು. ಅವಳು ಮೊದಲಿನಿಂದಲೂ ಚುರುಕಿನ ಸ್ವಭಾವದವಳು. ಮೊನ್ನೆ ಫೋನ್ ಮಾಡಿ ನಮ್ಮ ಜೊತೆ ಮಾತಾಡಿದ್ದಳು. ನಮಗೆ ಧೈರ್ಯದಿಂದ ಇರುವಂತೆ ತಿಳಿಸಿದ್ದಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣ ಸಂಪೂರ್ಣ ತನಿಖೆಗೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಚೈತ್ರಾಳನ್ನು ಗುರಿ ಮಾಡಿಕೊಂಡು ಯಾರೋ ದುಡ್ಡು ತಿಂದಿದ್ದಾರೆ. ಅವಳು ಯಾವ ಟೆನ್ಶನ್‌ನಲ್ಲಿ ಇದ್ದರೂ ನಮಗೆ ಹೇಳುವುದಿಲ್ಲ ಎಂದು ಚೈತ್ರಾ ತಾಯಿ ರೋಹಿಣಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್