ಅಭಿಮಾನಿಗಳಿಗೆ ಷರತ್ತು ವಿಧಿಸಿದ ಚಾಲೆಂಜಿಂಗ್ ಸ್ಟಾರ್!

Public TV
1 Min Read

ಬೆಂಗಳೂರು: ಶನಿವಾರ ಸಂಜೆ ಆರ್ ಆರ್ ನಗರದ ತಮ್ಮ ನಿವಾಸಕ್ಕೆ ಫಾನ್ಸ್ ಗಳನ್ನು ಕರೆದು ಸಭೆ ನಡೆಸಿ, ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಷರತ್ತು ಹಾಕಿದ್ದಾರೆ.

ಅಭಿಮಾನಿಗಳೊಂದಿಗೆ ನೇರವಾಗಿ ಮಾತನಾಡಿದ ದರ್ಶನ್, ಯಾವುದೇ ಬೇರೆ ನಟರ ವಿರುದ್ಧ ಕಮೆಂಟ್ ಮಾಡೋದು, ಟ್ರೋಲ್ ಮಾಡೋದು ಅಥವಾ ನೆಗೆಟೀವ್ ಹೇಳಿಕೆಗಳನ್ನು ನೀಡಬಾರದು ಎಂದು ಬುದ್ಧಿ ಮಾತು ಹೇಳಿದ್ದಾರಂತೆ.

ಸ್ಯಾಂಡಲ್‍ವುಡ್ ‘ಬಾಸ್` ಯಾರು ಎಂಬುದರ ಬಗ್ಗೆ ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ನಟರ ಅಭಿಮಾನಿಗಳು ಬೇರೆ ಕಲಾವಿದರ ಬಗ್ಗೆ ಕೆಟ್ಟದಾಗಿ ಕಮೆಂಟ್, ಟ್ರೋಲ್ ಮಾಡತೊಡಗಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ತಮ್ಮ ಅಭಿಮಾನಿಗಳು ಶಿಸ್ತಿನಿಂದ ನಡೆದುಕೊಳ್ಳುವಂತೆ ಹೇಳಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ 40ಕ್ಕೂ ಹೆಚ್ಚು ಅಭಿಮಾನಿಗಳು ದರ್ಶನ್ ಹೇಳಿದಂತೆ ನಡೆದುಕೊಳ್ಳುವುದಾಗಿ ಅಂತಾ ಮಾತು ನೀಡಿ ಹಿಂದಿರುಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

Share This Article
1 Comment

Leave a Reply

Your email address will not be published. Required fields are marked *