ದರ್ಶನ್ ಇರೋವಾಗ ಅಲ್ಲಿ ನಾನ್ಯಾಕೆ – ಸುದೀಪ್ ಹೇಳಿಕೆಗೆ ಡಿ ಬಾಸ್ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಪ್ರಚಾರದ ಬಗ್ಗೆ ಈ ಹಿಂದೆ ಕಿಚ್ಚ ಸುದೀಪ್ ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ ಎಂದು ಹೇಳಿಕೆ ನೀಡಿದ್ದರು. ಈಗ ಈ ಹೇಳಿಕೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ದರ್ಶನ್, “ನಾನು ನನ್ನ ಬಗ್ಗೆ ಮಾತ್ರ ಹೇಳುತ್ತೇನೆ. ಅದನ್ನು ರಾಕ್‍ಲೈನ್ ಬಳಿ ಕೇಳಿ. ನಾನೊಬ್ನೇ ಇಲ್ಲ. ನಮ್ ಹೀರೋ ಯಶ್ ಸಹಾ ಇದಾರೆ. ನಮ್ಮದು ಒಂಟಿ ಎತ್ತಲ್ಲ. ಜೋಡಿ ಎತ್ತು. ಸುದೀಪ್ ಪ್ರಚಾರ ಮಾಡುವ ಬಗ್ಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು” ಎಂದು ಪ್ರತಿಕ್ರಿಯಿಸಿದ್ದಾರೆ.  ಇದನ್ನೂ ಓದಿ: ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ- ಸುಮಲತಾ ರಾಜಕೀಯ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

ಈ ಹಿಂದೆ ಕಿಚ್ಚ ಸುದೀಪ್, “ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ?. ಕ್ಯಾಂಪೆನ್ ವಿಚಾರವಾಗಿ ನನಗೆ ಇನ್ನೂ ಬುಲಾವ್ ಬಂದಿಲ್ಲ. ಬುಲಾವ್ ಬಂದರೆ ನಿಮಗೆ ಮೊದಲು ಹೇಳುತ್ತೇನೆ. ಸದ್ಯ ನಾನು ಈಗ ರಾಜಕೀಯದಿಂದ ತುಂಬಾ ದೂರ ಇದ್ದೇನೆ. ಅಲ್ಲದೆ ಸಾಕಷ್ಟು ನಿರ್ಮಾಪಕರು ನನ್ನನ್ನು ನಂಬಿ ಹಣ ಹಾಕಿದ್ದಾರೆ. ಹಾಗಾಗಿ ಸಿನಿಮಾದಲ್ಲಿ ಬ್ಯುಸಿ ಆಗಿದ್ದೇನೆ. ಸುಮಲತಾ ಅವರಲ್ಲೇ ಅಂಬರೀಶ್ ಎಂಬ ಹೆಸರು ಇದೆ. ಅಂಬರೀಶ್ ಒಂದು ದೊಡ್ಡ ಹೆಸರು. ಸುಮಲತಾ ಅವರಿಗೆ ಆ ಹೆಸರೇ ಸಾಕು. ಅಲ್ಲದೆ ದರ್ಶನ್ ಅವರು ಕೂಡ ಸುಮಲತಾ ಅವರ ಜೊತೆ ಇದ್ದಾರೆ. ರಾಜಕೀಯದಲ್ಲಿ ನನ್ನ ಒಲವು ಕಡಿಮೆ ಇದೆ” ಎಂದು ಸುದೀಪ್ ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *