ಆರೋಗ್ಯ ಇಲಾಖೆ ನಿರ್ಲಕ್ಷ್ಯ – ಗ್ರಾಮದ ಎಲ್ಲರಿಗೂ ಸಾಮೂಹಿಕ ಜ್ವರ

Public TV
1 Min Read

ಚಾಮರಾಜನಗರ: ಸಮರ್ಪಕ ಚಿಕಿತ್ಸೆ ದೊರೆಯದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಉಯಿಲನತ್ತ ಗ್ರಾಮಸ್ಥರು ಸಾಮೂಹಿಕವಾಗಿ ಜ್ವರ, ಮೈ-ಕೈನೋವು, ಮೂಳೆನೋವು ಮತ್ತು ಸಂದುನೋವಿನಿಂದ ಬಳಲುತ್ತಿದ್ದಾರೆ.

ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಜ್ವರ, ಮೈ-ಕೈನೋವು, ಮೂಳೆ ನೋವು, ಸಂದುನೋವಿನಿಂದ ಬಳಲುತ್ತಿದ್ದಾರೆ. ಇವರಿಗೆ ಕೇವಲ ಮಾತ್ರೆ ನೀಡಿ ಮತ್ತೆ ಯಾವುದೇ ಚಿಕಿತ್ಸೆ ನೀಡದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ.

ತೀವ್ರ ಜ್ವರ ಹಾಗು ಸಂದುನೋವಿನಿಂದ ಬಳಲುತ್ತಿರುವುದರಿಂದ ಪಕ್ಕದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುಲು ಸಾಧ್ಯವಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲೇ ಒಂದು ಕ್ಯಾಂಪ್ ಮಾಡಿ ಸಮಪರ್ಕ ಚಿಕಿತ್ಸೆ ನೀಡಬೇಕು ಇಲ್ಲವೆ ತಾಲೂಕು ಆಸ್ಪತ್ರೆ ಹಾಗು ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *