ಮಾದಪ್ಪನಿಗೆ ಹರಕೆ ತೀರಿಸಿದ ಸೆಂಚುರಿ ಸ್ಟಾರ್ ಶಿವಣ್ಣ

Public TV
1 Min Read

ಚಾಮರಾಜನಗರ: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಬೆಳಗ್ಗೆ ಚಲನಚಿತ್ರ ನಿರ್ಮಾಪಕ ಗುರುದತ್ ಜೊತೆ ಭೇಟಿ ನೀಡಿದ ಶಿವಣ್ಣ, ಕಳೆದ ತಿಂಗಳು ಲಂಡನ್‍ನಲ್ಲಿ ಬಲಗೈ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಶಸ್ತ್ರ ಚಿಕತ್ಸೆ ಯಶಸ್ವಿಯಾಗಲೆಂದು ಮಾದಪ್ಪನಲ್ಲಿ ಹರಕೆ ಕಟ್ಟಿಕೊಂಡಿದ್ದರು.

ಈಗ ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಬಳಿಕ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ತಮ್ಮ ಹರಕೆ ತೀರಿಸಿದ್ದಾರೆ. ಇದರ ಜೊತೆಗೆ ಬೆಟ್ಟದಲ್ಲಿರುವ ದಾಸೋಹ ಭವನಕ್ಕೆ 10 ಸಾವಿರ ಕಾಣಿಕೆ ಸಹ ನೀಡಿದ್ದಾರೆ. ಇದೇ ಸಮಯದಲ್ಲಿ ಬೆಟ್ಟದಲ್ಲಿ ಶಿವಣ್ಣನನ್ನು ನೋಡಿದ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

Share This Article
Leave a Comment

Leave a Reply

Your email address will not be published. Required fields are marked *