ಸಚಿವರ ಶಾಲಾ ವಾಸ್ತವ್ಯದಿಂದ ಮಕ್ಕಳಿಗೆ ಸಿಕ್ತು ವಾಹನ ಸೌಲಭ್ಯ

Public TV
1 Min Read

ಚಾಮರಾಜನಗರ: ಜಿಲ್ಲೆಯ ಅರಣ್ಯದಂಚಿನ ಗ್ರಾಮ ಪಚ್ಚೆದೊಡ್ಡಿ ವಿದ್ಯಾರ್ಥಿಗಳಿಗೆ ಕೊನೆಗೂ ವಾಹನ ಸೌಲಭ್ಯ ಕಲ್ಪಿಸಲಾಗಿದೆ.

ಹನೂರು ತಾಲೋಕಿನ ಅರಣ್ಯ ಗ್ರಾಮವಾದ ಪಚ್ಚೆದೊಡ್ಡಿಯಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರತಿದಿನ ಅಜ್ಜೀಪುರಕ್ಕೆ ಕಾಡಿನ ದಾರಿಯಲ್ಲೇ ನಡೆದು ಬರುತ್ತಿದ್ದರು. ಕಲ್ಲು ಮುಳ್ಳುಗಳ ಹಾದಿಯಲ್ಲಿ ಪ್ರಾಣಿಗಳ ಭಯದ ನಡುವೆ 10 ಕಿಲೋಮೀಟರ್ ನಡೆಯಬೇಕಿದ್ದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಠಿತಗೊಂಡಿತ್ತು.

ಇತ್ತೀಚೆಗೆ ಪಚ್ಚೆದೊಡ್ಡಿಯಲ್ಲಿ ಶಾಲಾ ವಾಸ್ತವ್ಯ ಮಾಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ವಾಹನ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಅರಣ್ಯ ಇಲಾಖೆಯ ಪರಿಸರ ಅಭಿವೃದ್ಧಿ ಸಮಿತಿಯಿಂದ ವಾಹನ ಸೌಲಭ್ಯ ಕಲ್ಪಿಸಲಾಗಿದ್ದು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಡಂಚಿನ ಗ್ರಾಮದಲ್ಲಿ ಶಿಕ್ಷಣ ಸಚಿವರ ಮೂರನೇ ಶಾಲಾ ವಾಸ್ತವ್ಯ

Share This Article
Leave a Comment

Leave a Reply

Your email address will not be published. Required fields are marked *