ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿಚಾರಣಾಧೀನ ಕೈದಿ ಎಸ್ಕೇಪ್

By
1 Min Read

ಚಾಮರಾಜನಗರ: ಕೋರ್ಟ್‍ಗೆ (Court) ಕರೆದೊಯ್ಯುವಾಗ ವಿಚಾರಣಾಧೀನ ಕೈದಿಯೊಬ್ಬ ಪೊಲೀಸರಿಂದ (Police) ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ತಮಿಳುನಾಡಿನ ಹಾಸನೂರು ಬಳಿ ನಡೆದಿದೆ.

ಆರೋಪಿಯನ್ನು ಚಾಮರಾಜನಗರ (Chamarajanagar) ಉಪಕಾರಾಗೃಹದಿಂದ ತಮಿಳುನಾಡಿನ (Tamil Nadu) ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ಮೇಗಲಹುಂಡಿಯ ಸುರೇಶ್ (28) ಎಂಬಾತ ಪರಾರಿಯಾದ ವ್ಯಕ್ತಿ. ಹಾಸನೂರು ಬಳಿ ಟೀ ಕುಡಿಯುವ ವೇಳೆ ಆರೋಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಟ್ಟುನಿಟ್ಟಿನ ಕ್ರಮ; ಅಪಘಾತಗಳ ಸಂಖ್ಯೆ ಇಳಿಕೆ

ಕಳ್ಳತನ ಪ್ರಕರಣಗಳಲ್ಲಿ ಬಂಧಿಯಾಗಿದ್ದ ಸುರೇಶ್ ಚಾಮರಾಜನಗರ ಜೈಲಿನಲ್ಲಿದ್ದ. ಆತನನ್ನು ತಮಿಳುನಾಡಿನ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ಕೋರ್ಟ್‍ಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಿಚಾರಣಾಧೀನ ಕೈದಿ ಸುರೇಶ್ ತಪ್ಪಿಸಿಕೊಂಡಿದ್ದಾನೆ. ಇದೀಗ ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಟೊಮೆಟೋ ಬಳಕೆಯನ್ನೇ ನಿಲ್ಲಿಸಿ- ಪಂಜಾಬ್ ರಾಜ್ಯಪಾಲ ಕರೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್