ನಾನು ಯಾವ ಕಾರಣಕ್ಕೂ ದಸರಾದಲ್ಲಿ ಭಾಗವಹಿಸುವುದಿಲ್ಲ _ ಶ್ರೀನಿವಾಸ್ ಪ್ರಸಾದ್

Public TV
1 Min Read

ಚಾಮರಾಜನಗರ: ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದರೂ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವುದಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ.

ಇಂದು ಕೊಳ್ಳೇಗಾಲದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವಾಗ ಅದ್ಧೂರಿ ದಸರಾದ ಅವಶ್ಯಕತೆ ಇರಲಿಲ್ಲ. ಆಹಾರ ಮೇಳ ಮಾಡಿ ತಿಂದು ತೇಗುವುದು. ಯುವ ದಸರಾ ನಡೆಸಿ ಕುಣಿದು ಕುಪ್ಪಳಿಸುವುದು ಸಂಪ್ರದಾಯಿಕ ದಸರಾವಲ್ಲ. ಇವನ್ನೆಲ್ಲ ಬಿಡಬೇಕು ಎಂದು ಅಸಮಾಧಾನ ಹೊರ ಹಾಕಿದರು.

ಸರಳವಾಗಿ ದಸರಾ ಆಚರಿಸುವಂತೆ ನಾನು ಹೇಳಿದ್ದೆ. ಆದರೆ ಉಸ್ತುವಾರಿ ಸಚಿವರು ಕೇಳಲಿಲ್ಲ. ದಸರಾ ಕಾರ್ಯಕ್ರಮಕ್ಕೆ ನನ್ನನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ನಾನು ಕೂಡ ಓರ್ವ ಜನಪ್ರತಿನಿಧಿ. ದಸರಾ ಕಾರ್ಯಕ್ರಮಗಳಿಗೆ ನಾನು ಯಾವ ಕಾರಣಕ್ಕೂ ಭಾಗವಹಿಸುವುದಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *