ಚಂದ್ರಯಾನ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

Public TV
2 Min Read

ಚಂದ್ರಯಾನ 3 (Chandrayaan 3) ಯೋಜನೆ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್  ಭಾರೀ ವೈರಲ್ ಆಗಿತ್ತು. ಜೊತೆಗೆ ಅನೇಕರು ಅದಕ್ಕೆ ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರು. ಇಡೀ ಭಾರತವೇ ಹೆಮ್ಮೆ ಪಡುತ್ತಿರುವಾಗ ಪ್ರಕಾಶ್ ರಾಜ್ ಈ ರೀತಿ ವ್ಯಂಗ್ಯ ಮಾಡುವುದು ಸರಿಯಲ್ಲ ಎಂದು ಹಲವರು ಬುದ್ದಿವಾದ ಹೇಳಿದ್ದರು. ನೆಗೆಟಿವ್ ಕಾಮೆಂಟ್ ಹೆಚ್ಚಾದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದರು ಪ್ರಕಾಶ್ ರಾಜ್. ಹಾಸ್ಯ ಪ್ರಜ್ಞೆ ಇಲ್ಲದವರು ಎಂದು ಟೀಕಿಸಿದ್ದರು.

ಈ ಬೆಳವಣಿಗೆಯ ನಡುವೆಯೇ ಚಂದ್ರಯಾನ ಮತ್ತು ಭಾರತೀಯ ವಿಜ್ಞಾನಿಗಳನ್ನು ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ (Banahatti) ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ವಿರುದ್ದ ದೂರು (Complaint) ದಾಖಲಾಗಿದೆ. ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರಿಂದ ದೂರು ಸಲ್ಲಿಸಿದ್ದಾರೆ. ನಮ್ಮ ಹೆಮ್ಮೆಯ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಫೋಸ್ಟ್ ಮಾಡಿ ಪ್ರಕಾಶ್ ರಾಜ್ ತಮ್ಮ ವಿಕೃತಿ ಮೆರೆದಿದ್ದಾರೆ. ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನ ಬಂಧಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ. ಇಸ್ರೋ ಕಳುಹಿಸಿರುವ ಚಂದ್ರಯಾನ‌ ನೌಕೆಯಿಂದ ಭಾರತದ  ಶಕ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನ ಎಲ್ಲರೂ ಹೊಗಳುತ್ತಿರುವಾಗ. ಪ್ರಕಾಶ್ ರಾಜ್ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಅವರ ವಿರುದ್ದ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದ ಪ್ರಕಾಶ್ ರಾಜ್

ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್‌ ಮತ್ತೊಂದು ಟ್ವೀಟ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.  ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‍ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.  ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ.

 

ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಕಾಶ್‌ ರಾಜ್‌, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್‌ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿʼ ಎಂದು ಸ್ಪಷ್ಟನೆ ನೀಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್