ಬೀದರ್ ನಲ್ಲಿ ಚನ್ನಬಸವ ಪಟ್ಟದೇವರ ಜಯಂತಿ ಆಚರಣೆ

Public TV
1 Min Read

ಬೀದರ್: ಶರಣ ಸಂಸ್ಕೃತಿ ಮತ್ತು ಕನ್ನಡ ನಾಡು ನುಡಿಯನ್ನು ರಕ್ಷಿಸಿದ ಚನ್ನಬಸವ ಪಟ್ಟದೇವರ ಜಯಂತಿಯನ್ನು ಇಂದು ಆಚರಿಸಲಾಯ್ತು.

ಜಿಲ್ಲೆಯ ಭಾಲ್ಕಿ ಪಟ್ಟಣದ ಹಿರೇಮಠದಲ್ಲಿ 130ನೇ ಜಯಂತೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗದ ಬೆಕ್ಕಿನ ಕಲ್ಮಠ ಶ್ರೀಗಳಾದ ಜಗತ್ ಗುರು ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ವಸತಿ ಸಚಿವರಾದ ವಿ.ಸೋಮಣ್ಣ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರು ಪುರೋಹಿತ ಶಾಹಿಗಳ ಕಪಿಮುಷ್ಟಿಯಿಂದ ಶರಣ ಸಂಸ್ಕೃತಿಯನ್ನು ರಕ್ಷಣೆ ಮಾಡಿದ್ದರು. ಇಪ್ಪತ್ತನೆಯ ಶತಮಾನದಲ್ಲಿ ನಿಜಾಮರ ದಬ್ಬಾಳಿಕೆಗೆ ಸಿಲುಕಿದ್ದ ಶರಣ ಸಂಸ್ಕೃತಿ ಮತ್ತು ಕನ್ನಡ ನಾಡು ನುಡಿಯನ್ನು ಚನ್ನಬಸವ ಪಟ್ಟದೇವರು ರಕ್ಷಿಸಿದರು ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಸಂಸದರಾದ ಭಗವಂತ ಖೂಬಾ, ಭಾರತಿ ಜನತಾ ಪಕ್ಷದ ಮುಖಂಡರಾದ ಆ.ಏ ಸಿದ್ರಾಮ, ಬಾಬುವಾಲಿ ಮಠದ ಶ್ರೀಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *