ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
1 Min Read

ಹಾಸನ: ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಸೋಮವಾರ ರಾತ್ರಿ ಬೋನಿಗೆ ಬಿದ್ದಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ ಬನವಾಸೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆ ಭಯ ಹುಟ್ಟಿಸಿತ್ತು.

ಬಸವಾಸೆ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆಯೊಂದರ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಚಿರತೆ ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರು ಸಾಕಿದ್ದ ಕರು, ಕುರಿಮರಿಗಳನ್ನು ತಿಂದು ಪರಾರಿಯಾಗುತ್ತಿತ್ತು. ಆದರಿಂದ ಈ ಭಾಗದ ಜನರು ಚಿರತೆ ಯಾವಾಗ ಬಂದು ಇನ್ನೇನು ಮಾಡುತ್ತೋ ಅಂತ ಭಯದಿಂದ ಜೀವನ ಮಾಡುತ್ತಿದ್ದರು. ಚಿರತೆ ಕಾಟಕ್ಕೆ ಜನರು ಮನೆಗಳಿಂದ ಹೊರಬರಲು ಹೆದರುತ್ತಿದ್ದರು.

ಚಿರತೆನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಬೋನನ್ನು ಇಟ್ಟಿದ್ದರು. ಆಹಾರ ಅರಸಿ ರಾತ್ರಿ ಮತ್ತೆ ಗ್ರಾಮಕ್ಕೆ ಬಂದ ಚಿರತೆ ಬೋನಿಗೆ ಬಿದ್ದಿದೆ. ಇದನ್ನು ಕಂಡು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *