ಮುಡಾ ಸಂಕಷ್ಟದ ಹೊತ್ತಲ್ಲೇ ಆದಿಶಕ್ತಿ ಮೊರೆ ಹೋದ ಸಿಎಂ – ಇಂದು ಬೆಳಗಾವಿಗೆ ಭೇಟಿ

Public TV
0 Min Read

ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮನ (Saundatti Yellamma Temple) ದರ್ಶನ ಪಡೆಯಲಿದ್ದಾರೆ.

ಮುಡಾ ಸಂಕಷ್ಟದ ಬೆನ್ನಲ್ಲೇ ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಮಧ್ಯಾಹ್ನ 1:30ಕ್ಕೆ ಸವದತ್ತಿಗೆ ಆಗಮಿಸಲಿದ್ದಾರೆ. ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದು, ಬಳಿಕ ರಸ್ತೆ ಮಾರ್ಗವಾಗಿ ಸವದತ್ತಿಗೆ ಬರಲಿದ್ದಾರೆ.

ಸಿಎಂ ರೇಸನಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆ ಸಿದ್ದರಾಮಯ್ಯರ ಬೆಳಗಾವಿ ಜಿಲ್ಲೆ ಪ್ರವಾಸ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

Share This Article