Chikkaballapur| ಸಚಿವ ಡಾ.ಎಂಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು

Public TV
1 Min Read

ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ (M. C. Sudhakar) ನಿವಾಸದ ಸಮೀಪ ಸ್ಕಾರ್ಪಿಯೋ (Scorpio) ಕಾರಿಗೆ ಬೆಂಕಿ ತಗುಲಿದೆ.

ಸಂಜೆ ಇದ್ದಕ್ಕಿದ್ದಂತೆ ನಿಲ್ಲಿಸಿದ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಕೂಡಲೇ ಅಕ್ಕ ಪಕ್ಕದವರು ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಕಡ್ಲೇಪುರಿಯಂತೆ ಮುಡಾ ಸೈಟ್ ಹಂಚಿಕೆ – 1962ರಲ್ಲಿ ವಶಪಡಿಸಿಕೊಂಡ ಭೂಮಿಗೆ 2023ರಲ್ಲಿ ಪರಿಹಾರ!

ಚಿಂತಾಮಣಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನ ನಂಬರ್ ಆಧರಿಸಿ ಮಾಲೀಕರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್‌; ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Share This Article