ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

Public TV
1 Min Read

ಚಿಕ್ಕಬಳ್ಳಾಪುರ: ಪತಿ ನಿಧನವಾದ ಬಳಿಕ ತಾಯಂದಿರು ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಮುಂದುವರಿಯಬಾರದು ಎನ್ನುವ ಆಲೋಚನೆ ಅನಾಗರಿಕತೆಯನ್ನು ತೋರಿಸುತ್ತದೆ ಎಂದು ಶಾಸಕ ಡಾ.ಸುಧಾಕರ್ ಅವರು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಸಚಿವ ರೇವಣ್ಣ ಅವರು ಮಹಾನ್ ದೈವ ಭಕ್ತರೆಂದು ನಾನು ತಿಳಿದುಕೊಂಡಿದ್ದೆ. ಅವರ ಬಾಯಿಂದ ಈ ಮಾತು ನಿರೀಕ್ಷೆ ಮಾಡಿರಲಿಲ್ಲ. ಸಚಿವರು ಯಾವ ಆಲೋಚನೆಯಿಂದ ಸುಮಲತಾ ಅವರ ಬಗ್ಗೆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಆದರೆ ಸುಮಲತಾ ಅವರಲ್ಲಿ ತಕ್ಷಣ ಕ್ಷಮಾಪಣೆ ಕೇಳಬೇಕೆಂದು ಸಚಿವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ: ಸುಮಲತಾ ಪರ ಬ್ಯಾಟ್ ಮಾಡಿ ಸಿಎಂಗೆ ಶಾಸಕ ಸುಧಾಕರ್ ಟಾಂಗ್!

ಸುಮಲತಾ ಅಂಬರೀಶ್ ಅವರಿಗೆ ಕ್ಷಮೆ ಕೇಳಿದರೆ ಸಚಿವರಿಗೆ ಗೌರವ ಬರುತ್ತದೆ. ಈಗಾಗಲೇ ಸುಮಲತಾ ತುಂಬಾ ದುಃಖದಲ್ಲಿದ್ದಾರೆ. ಹೀಗಿದ್ದರೂ ಸಹ ಅವರು ಚುನಾವಣೆಗೆ ನಿಲ್ಲಲು ಹಾಗೂ ಮಂಡ್ಯದ ಜನರ ಜೊತೆ ನಿಲ್ಲುವ ಧೈರ್ಯ ತೋರಿದ್ದಾರೆ. ಅದನ್ನು ನಾವು ಮೆಚ್ಚಬೇಕು. ಅಂತಹವರಿಗೆ ನಮ್ಮಿಂದ ಆಗುವ ಸಹಾಯ ಮಾಡಬೇಕೇ ಹೊರತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *