ಒಂದು ವರ್ಷ ಎರಡು ತಿಂಗಳ ಅನೈತಿಕ ಸಂಬಂಧ ಇಂದಿಗೆ ಅಂತ್ಯ – ಉಮೇಶ್ ಕತ್ತಿ

Public TV
1 Min Read

ಬೆಂಗಳೂರು: ಮೈತ್ರಿ ಸರ್ಕಾರದ ಒಂದು ವರ್ಷ ಎರಡು ತಿಂಗಳ ಅನೈತಿಕ ಸಂಬಂಧ ಮುರಿದು ಹೋಯ್ತು ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ವ್ಯಂಗ್ಯವಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರನ್ನು ಅಧಿಕಾರದಿಂದ ದೂರ ಇಡಲು ಅನೈತಿಕ ಸಂಬಂಧ ಬೆಳೆಸಿಕೊಂಡು ಬಂದರು. ಒಂದು ವರ್ಷ ಎರಡು ತಿಂಗಳಿಗೆ ಅದು ಬಿದ್ದು ಹೋಯ್ತು. ಮುಂದೆ ಹೊಸ ಸರ್ಕಾರ ರಚನೆ ಮಾಡುತ್ತೇವೆ ಮತ್ತು ಉತ್ತಮ ಆಡಳಿತ ಕೊಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್, ಜೆಡಿಎಸ್ ಅನೈತಿಕ ಸಂಬಂಧ ಇಂದಿಗೆ ಅಂತ್ಯವಾಗಿದೆ. ಈ ಸಂಬಂಧ ಅಂತ್ಯವಾಗಲು ಸಿದ್ದರಾಮಯ್ಯ ಎಂದ ಅವರು, ಸರ್ಕಾರ ರಚನೆ ಮಾಡಲು ರಾಜ್ಯಪಾಲರನ್ನು ಭೇಟಿ ಆಗುತ್ತೇವೆ. ಇಲ್ಲದೆ ಇದ್ದರೆ ಮತ್ತೊಂದು ಚುನಾವಣೆಗೂ ಹೋಗಲು ನಾವು ಸಿದ್ಧ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *