ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್!

Public TV
1 Min Read

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಬೀರೂರು (Birur) ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ (Mlaralingana Karnika) ನುಡಿ ಇಂದು (ಅ.3) ಬೆಳಗಿನ ಜಾವ ಹೊರಬಿದ್ದಿದೆ.

ಬೀರೂರಿನ ಮಹಾನವಮಿ ಬಯಲಿನಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ. `ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ. ಧರ್ಮ – ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದಿರಬೇಕು ಪರಾಕ್ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ಪರಮೇಶ್ವರ್‌ಗೆ ಮುಖ್ಯಮಂತ್ರಿ ಭಾಗ್ಯ: ಹಾಲುಮತ ಗೊರವಯ್ಯರಿಂದ ಕಾರ್ಣಿಕ ಭವಿಷ್ಯ

ಕಾರ್ಣಿಕದ ಸಂದೇಶ
ಧರ್ಮ ಮತ್ತು ಅಧರ್ಮಗಳ ನಡುವಿನ ಸಂಘರ್ಷವು ಹೆಚ್ಚಾಗಿ ಜಾಗತಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಇದರೊಂದಿಗೆ, ಧರೆಗೆ ವರುಣನ ಆಗಮನವಾಯಿತು ಎಂಬ ನುಡಿಯು ಉತ್ತಮ ಮಳೆ ಮತ್ತು ಸುಭಿಕ್ಷತೆಯ ನಿರೀಕ್ಷೆಯನ್ನು ಹುಟ್ಟಿಸಿದೆ.

ಇಲ್ಲಿ ನುಡಿಯುವ ಕಾರ್ಣಿಕವು ವರ್ಷದೊಳಗೆ ನೆರವೇರುತ್ತದೆ ಎಂಬ ನಂಬಿಕೆ ಈ ಪ್ರದೇಶದ ಜನರಲ್ಲಿದೆ. ದಶರಥ ಪೂಜಾರರು ದಸರಾದ 9-10 ದಿನಗಳ ಕಾಲ ಅತ್ಯಂತ ಮಡಿಯಿಂದಿದ ಇದ್ದು ಕಾರ್ಣಿಕ ನುಡಿಯುವ ಕೊನೆ ದಿನ ನೀರನ್ನೂ ಕುಡಿಯದೇ ಉಪವಾಸದಿಂದಿದ್ದು ಪೂಜೆ ಬಳಿಕ ಉಪಹಾರ ಸೇವಿಸುತ್ತಾರೆ. ಈ ಪ್ರಸಿದ್ಧ ಮೈಲಾರಲಿಂಗಸ್ವಾಮಿಯ ಕಾರ್ಣಿಕಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಇದನ್ನೂ ಓದಿ: ನ್ಯಾಯದ ತಕ್ಕಡಿ ಜರುಗಿತು, ಜೀವರಾಶಿ ಸಂಪಾದಲೆ ಪರಾಕ್ – ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

Share This Article