ಕತ್ತು ಸೀಳಿ ಒಂಟಿ ಮಹಿಳೆಯ ಬರ್ಬರ ಹತ್ಯೆ

Public TV
1 Min Read

– ಮನೆಯಲ್ಲಿದ್ದ ವಸ್ತುಗಳೆಲ್ಲಾ ಲೂಟಿ

ಚಿಕ್ಕಮಗಳೂರು: ಒಂಟಿ ಮಹಿಳೆಯ ಕತ್ತು ಸೀಳಿ ಮನೆಯನ್ನು ದೋಚಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ.

ಮೃತರನ್ನ 31 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಮೃತ ಕವಿತಾಳ ಗಂಡ ಕಡೂರು ತಾಲೂಕಿನ ಬೀರೂರು ನಗರದಲ್ಲಿ ದಂತ ವೈದ್ಯರಾಗಿದ್ದಾರೆ. ವೈದ್ಯ ಪತಿ ಕ್ಲೀನಿಕ್‍ಗೆ ಹೋದಾಗ ಈ ದುರ್ಘಟನೆ ನಡೆದಿದೆ.

ಕವಿತಾಳನ್ನ ಸಂಜೆ 6.45 ರಿಂದ 8.15ರೊಳಗೆ ಕೊಲೆ ಮಾಡಲಾಗಿದೆ. ಸಂಜೆ 6.45ಕ್ಕೆ ಆಕೆ ಕೊನೆಯದಾಗಿ ತನ್ನ ಗಂಡನೊಂದಿಗೆ ಮಾತನಾಡಿದ್ದಾಳೆ. 8.15ಕ್ಕೆ ಆಕೆಯ ಸಾವಿನ ಸಂಗತಿ ಹೊರಬಂದಿದೆ.

ಕೊಲೆಗೈದವರು ಮನೆಯ ಬೀರುವಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನ ದೋಚಿದ್ದಾರೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಸ್ಥಳಕ್ಕೆ ಭೇಟಿ ನೀಡಿರೋ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗಕ್ಕೆ ರವಾನಿಸಿದ್ದಾರೆ.

ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮನೆಯ ಸುತ್ತಮುತ್ತ ಇದ್ದ ಸಿಸಿಟಿವಿ ದೃಶ್ಯಾವಳಿಗಳನ್ನ ಪೊಲೀಸರು ವಶಪಡಿಕೊಂಡಿದ್ದಾರೆ. ಆದರೆ ಒಂಟಿ ಮಹಿಳೆಯ ಈ ರೀತಿ ಬರ್ಬರ ಕೊಲೆ ಕಂಡ ಕಡೂರಿಗರು ಬೆಚ್ಚಿ ಬಿದ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *