ಸ್ಮಶಾನದಲ್ಲಿ ತಿಂಡಿ ತಿಂದು ಗ್ರಹಣ ಆಚರಿಸಿದ ಯುವಕರು

Public TV
1 Min Read

ಚಿಕ್ಕಮಗಳೂರು: ಈ ಶತಮಾನದ ಕೊನೆಯ ಸೂರ್ಯ ಗ್ರಹಣದಂದು ಯಾವುದೇ ಹೆದರಿಕೆ, ಅಂಜಿಕೆ ಇಲ್ಲದೆ ಗ್ರಹಣದ ಸಮಯದಲ್ಲಿ ಸ್ಮಶಾನದಲ್ಲಿ ಊಟ ಮಾಡಿದ್ದಾರೆ.

ಜಿಲ್ಲೆಯ ತರೀಕೆರೆ ತಾಲೂಕಿನ ಗಾಳಿಹಳ್ಳಿ ನಿವಾಸಿಗಳಾದ ಮೋಹನ್ ಹಾಗೂ ಪರಶುರಾಮ ಎಂಬವರು ಸ್ಮಶಾನದಲ್ಲಿ ಸಮಾಧಿಯೊಂದರ ಮೇಲೆ ಕೂತು ತಿಂಡಿ ತಿಂದಿದ್ದಾರೆ. ಅಷ್ಟೇ ಅಲ್ಲದೆ ಗ್ರಹಣ ಆರಂಭವಾದಾಗಿನಿಂದ ಸ್ಮಶಾನದಲ್ಲೇ ಇದ್ದು, ಸ್ಮಶಾನವನ್ನು ಶುಚಿ ಮಾಡಿದ್ದಾರೆ.

ಮೋಹನ್ ಹಾಗೂ ಪರಶುರಾಮ ಸ್ಮಶಾನದಲ್ಲಿ ಅಲ್ಲಲ್ಲೇ ಬಿದ್ದಿದ್ದ ಪೇಪರ್, ಪ್ಲಾಸ್ಟಿಕ್, ಕಸ-ಕಡ್ಡಿಯನ್ನೆಲ್ಲಾ ಒಂದೆಡೆ ಹಾಕಿ ಬೆಂಕಿ ಹಾಕಿದ್ದಾರೆ. ಗ್ರಹಣ ಮುಗಿಯೋವರೆಗೂ ಸ್ಮಶಾನದಲ್ಲೇ ಇದ್ದು 12 ಗಂಟೆ ನಂತರ ಮನೆಗೆ ಹಿಂದಿರುಗಿದ್ದಾರೆ.

ಸ್ಮಶಾನ, ಅಮವಾಸ್ಯೆ, ಗ್ರಹಣ ಇವ್ಯಾವು ನರಮಾನವನಷ್ಟು ಕ್ರೂರಿ ಅಲ್ಲ ಎನ್ನುವುದು ಈ ಯುವಕರ ನಂಬಿಕೆಯಾಗಿದೆ. ಇವುಗಳಿಗೆ ಮನುಷ್ಯನಲ್ಲಿರುವಷ್ಟು ಕೆಟ್ಟ ಯೋಚನೆ, ಆಲೋಚನೆ ಹಾಗೂ ಚಿಂತನೆಗಳಿಲ್ಲ ಎಂಬುದು ಇವರ ಧೃಡ ನಂಬಿಕೆಯಾಗಿದೆ. ಒಳ್ಳೆಯದ್ದನ್ನ ಯೋಚಿಸುವವರಿಗೆ ಒಳ್ಳೆಯದ್ದೆ ಆಗಲಿದ್ದು, ಕೆಟ್ಟ ಯೋಚನೆ ಇರುವವರಿಗೆ ಆಗುವುದೆಲ್ಲಾ ಕೆಟ್ಟದ್ದೇ ಎಂದು ಹೇಳಿದ್ದಾರೆ.

ಅಲ್ಲದೆ ಮಾಡುವ ಕೆಲಸ, ಆಡುವ ಮಾತು, ನೋಡುವ ನೋಟ ಚೆನ್ನಾಗಿದ್ದರೆ ಆಗುವುದೆಲ್ಲಾ ಒಳ್ಳೆಯದ್ದೆ. ಗ್ರಹಣ, ಅಮವಾಸ್ಯೆ, ಹುಣ್ಣಿಮೆ ಇದ್ಯಾವುದು ಕೆಟ್ಟದ್ದು ಮಾಡುವುದಿಲ್ಲ ಎಂದು ಮೋಹನ್ ಹಾಗೂ ಪರಶುರಾಮ ನಂಬಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *