ರಾತ್ರಿಯಿಡೀ ಖಾರದಪುಡಿ, ದೊಣ್ಣೆ ಹಿಡಿದುಕೊಂಡು ಓಡಾಡಿದ ಮಹಿಳೆಯರು!

Public TV
1 Min Read

ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಕ್ಕಳ ಕಳ್ಳರ ವದಂತಿಯ ಹಾವಳಿಯಿಂದ ಹುಬ್ಬಳ್ಳಿಗರು ಆತಂಕಗೊಂಡಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಕಳ್ಳರಿಗಾಗಿ ಶೋಧ ಕಾರ್ಯ ಮಾಡಿದ್ದಾರೆ.

ಹುಬ್ಬಳ್ಳಿಯ ಮಂಟೂರು ರಸ್ತೆಯ ಸುಣ್ಣದ ಭಟ್ಟಿ ನಿವಾಸಿಗಳು ಆತಂಕಗೊಂಡಿದ್ದು, ಮಕ್ಕಳ ಕಳ್ಳರು ಬಂದಿದ್ದಾರೆಂಬ ವದಂತಿ ಹಿನ್ನೆಲೆಯಲ್ಲಿ ಮಹಿಳೆಯರು ರಾತ್ರಿ ಇಡೀ ಖಾರದಪುಡಿ ಹಾಗೂ ದೊಣ್ಣೆ ಹಿಡಿದುಕೊಂಡು ಓಡಾಡಿದ್ದಾರೆ.

ಇದೇ ಪ್ರದೇಶದಲ್ಲಿ ರೈಲ್ವೆ ಬೋಗಿಗಳನ್ನ ನಿಲ್ಲಿಸಲಾಗಿರುತ್ತದೆ. ಅದರಲ್ಲೇ ಮಕ್ಕಳ ಕಳ್ಳರು ಅಡಗಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾತ್ರಿ ಇಡೀ ಮಕ್ಕಳ ಕಳ್ಳರಿಗಾಗಿ ಶೋಧ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ್ರೂ ಪೊಲೀಸರು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ತಾವೇ ಕಳ್ಳರಿಗಾಗಿ ರಾತ್ರಿಯಿಡೀ ಶೋಧ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *