ಬೆಂಗಳೂರು: ಪೊಲೀಸರು ಸರ್ಕಾರಕ್ಕೆ ಬರೆದ ಪತ್ರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಯಾವುದೇ ಉತ್ತರ ನೀಡದೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತೆರಳಿದ ಪ್ರಸಂಗ ಇಂದು ನಡೆಯಿತು.
ವಿಧಾನಸೌಧದಲ್ಲಿ (Vidhana Soudha) ಆರ್ಸಿಬಿ ವಿಜಯೋತ್ಸವ ಆಚರಣೆಗೆ ಅವಕಾಶ ನೀಡಿದರೆ ಬಂದೋಬಸ್ತ್ಗೆ ಸಮಸ್ಯೆಯಾಗುತ್ತದೆ ಎಂದು ವಿಧಾನಸೌಧದ ಡಿಸಿಪಿ ಕರಿಬಸವನಗೌಡ ಅವರು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ(DPAR) ಕಾರ್ಯದರ್ಶಿ ಸತ್ಯವತಿ ಅವರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟವಾಗಿ ತಿಳಿಸಿದ್ದರು.
ಈ ಪತ್ರ ಬಹಿರಂಗವಾದ ಬೆನ್ನಲ್ಲೇ ಇಂದು ಬೆಳಗ್ಗೆಯಿಂದ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಸಂಬಂಧ ಡಿಸಿಎಂ ಅಭಿಪ್ರಾಯ ಪಡೆಯಲು ಪಬ್ಲಿಕ್ ಟಿವಿ ಸದಾಶಿವನಗರಕ್ಕೆ ತೆರಳಿತ್ತು.
ಪತ್ರದ ಬಗ್ಗೆ ಬಿಜೆಪಿಯವರು (BJP) ಒಂದು ಕಡೆ ಪ್ರತಿಭಟನೆ ಮಾಡುತ್ತಿದ್ದರೆ ಇನ್ನೊಂದು ಕಡೆ ಪೊಲೀಸರು ಸರ್ಕಾರಕ್ಕೆ ಬರೆದ ಪತ್ರ ಬಹಿರಂಗವಾಗಿದೆ. ಇದಕ್ಕೆ ಏನು ಹೇಳುತ್ತೀರಿ ಎಂದು ಪಬ್ಲಿಕ್ ಟಿವಿ ಪ್ರಶ್ನೆ ಮಾಡಿದೆ. ಈ ಪ್ರಶ್ನೆಗೆ ಡಿಕೆಶಿ ಯಾವುದೇ ಉತ್ತರ ನೀಡದೇ ಕಾರಿನಲ್ಲಿ ಮುಂದೆ ಸಾಗಿದರು. ಇದನ್ನೂ ಓದಿ: Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ
ಡಿಸಿಪಿ ಬರೆದ ಪತ್ರದಲ್ಲಿ ಏನಿದೆ?
ಆರ್ಸಿಬಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ ಇದ್ದು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ.
ಈ ರೀತಿ ಬೃಹತ್ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಅಧಿಕಾರಿಗಳು ಹಾಗೂ ಸಂಚಾರ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಲು ಸಮಯ ಅವಕಾಶ ಬೇಕಿದೆ. ಇದನ್ನೂ ಓದಿ: ಆರ್ಸಿಬಿ ಅಂದ್ರೆ Real Culprits of Bangalore – ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ
ವಿಧಾನಸೌಧದ ಸಚಿವಾಲಯ ಅಧಿಕಾರಿಗಳು ಸಿಬ್ಬಂದಿ ತಮ್ಮ ತಮ್ಮ ಕುಟುಂಬ ವರ್ಗದವರನ್ನು ಕರೆತರುವ ಸಾಧ್ಯತೆಗಳು ಹೆಚ್ಚಾಗಿದ್ದು ಸಿಬ್ಬಂದಿಗೆ ಕುಟುಂಬ ವರ್ಗದವರನ್ನು ಕರೆತರದಂತೆ ಆದೇಶಿಸಬೇಕು.
ಭದ್ರತೆ ದೃಷ್ಟಿಯಿಂದ ಸಿಸಿಟಿವಿ ಅಳವಡಿಸಲು ಅವಶ್ಯಕತೆ ಇರುತ್ತದೆ ವಿಧಾನಸೌಧ ಕಟ್ಟಡವು ವೈಟಲ್ ಇನ್ಸ್ಟಾಲೇಶನ್ ಕಟ್ಟಡವಾಗಿದ್ದು ಸಿಸಿಟಿವಿ ಅವಶ್ಯಕತೆ ಹೆಚ್ಚಾಗಿರುತ್ತದೆ.
ವೇದಿಕೆಯ ಮೇಲೆ ಆಟಗಾರರು ಹಾಗೂ ಮುಖ್ಯಮಂತ್ರಿ ಕುಳಿತುಕೊಳ್ಳುವ ವ್ಯವಸ್ಥೆ ಇರುವುದರಿಂದ ಲೋಕೋಪಯೋಗಿ ಇಲಾಖೆಯಿಂದ ಮುಂಚಿತವಾಗಿಯೇ ವೇದಿಕೆಯನ್ನು ಪರೀಕ್ಷಿಸಬೇಕು ಹಾಗೂ ಕನಿಷ್ಠ ಎರಡು ಗಂಟೆ ಆಯೋಜಕರಿಗೆ ಬಿಟ್ಟುಕೊಡಲು ತಿಳಿಸಬೇಕು.