ಮೈಸೂರು: ವಿಧಾನ ಸೌಧದಲ್ಲಿ (Vidhana Soudha) ಏನಾಗಿದೆ? ಸತ್ಯವತಿ ಏನ್ ಮಾಡಿದ್ದಾರೆ? ಏನು ತಪ್ಪಾಗಿದೆ ಎಂದು ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಸತ್ಯವತಿಗೆ ಕ್ಲೀನ್ಚಿಟ್ ನೀಡಿದ್ದಾರೆ.
ವಿಧಾನಸೌಧದಲ್ಲಿ (Vidhana Soudha) ಆರ್ಸಿಬಿ ವಿಜಯೋತ್ಸವ ಆಚರಣೆಗೆ ಅವಕಾಶ ನೀಡಿದರೆ ಬಂದೋಬಸ್ತ್ಗೆ ಸಮಸ್ಯೆಯಾಗುತ್ತದೆ ಎಂದು ವಿಧಾನಸೌಧದ ಡಿಸಿಪಿ ಕರಿಬಸವನಗೌಡ ಅವರು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (DPAR) ಕಾರ್ಯದರ್ಶಿ ಸತ್ಯವತಿ (Sathyavathi ) ಅವರಿಗೆ ಬರೆದ ಪತ್ರ ಇಂದು ಬಹಿರಂಗವಾಗಿತ್ತು.
ಈ ಪತ್ರ ಬಹಿರಂಗವಾದ ಬೆನ್ನಲ್ಲೇ ಮಾಧ್ಯಮಗಳು ಇಂದು ಸಂಜೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದವು. ಇದನ್ನೂ ಓದಿ: ಪರಿಷತ್ಗೆ ಶಿಫಾರಸ್ಸಾಗಿದ್ದ 4 ಹೆಸರುಗಳಿಗೆ ಕೊನೆ ಕ್ಷಣದಲ್ಲಿ ಹೈಕಮಾಂಡ್ ಬ್ರೇಕ್!
ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಪೊಲೀಸರ ಪತ್ರಕ್ಕೆ ಸತ್ಯವತಿ ಏನು ಉತ್ತರ ನೀಡಿದ್ದಾಳೆ ಎನ್ನುವುದು ನಿಮಗೆ ಗೊತ್ತಾ ಎಂದು ಮರು ಪ್ರಶ್ನೆ ಹಾಕಿದರು. ಇದನ್ನೂ ಓದಿ: ಪೊಲೀಸರದ್ದೇ ತಪ್ಪು, ಸರ್ಕಾರಕ್ಕೆ ಯಾಕೆ ಮುಜುಗರ ಆಗ್ಬೇಕು: ಸಿದ್ದರಾಮಯ್ಯ ಪ್ರಶ್ನೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy Stadium) ನಡೆದ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ. ವಿಧಾನಸೌಧದ ಕಾರ್ಯಕ್ರಮವನ್ನು ಸರ್ಕಾರ ಆಯೋಜನೆ ಮಾಡಿಲ್ಲ. ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಈ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಸತ್ಯವತಿಯವರು ನನ್ನ ಬಳಿ ಈ ಕಾರ್ಯಕ್ರಮದ ಬಗ್ಗೆ ಕೇಳಿದರು. ನಾನು ಅನುಮತಿ ನೀಡಿ ಎಂದು ಹೇಳಿದ್ದೇನೆ. ವಿಧಾನಸೌಧದಲ್ಲಿ ಏನಾದರೂ ಘಟನೆ ಆಗಿದ್ಯಾ? ಸತ್ಯವತಿ ಏನು ತಪ್ಪು ಮಾಡಿದ್ದಾರೆ ಎಂದು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಪ್ರಶ್ನಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಕರೆದಿದ್ದರು ನಾನು ಹೋಗಿದ್ದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ರಾಜ್ಯಪಾಲರು ಆಗಮಿಸಿದ್ದರು. ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ವಿಧಾನಸೌಧದಲ್ಲಿ ಯಾವುದೇ ಘಟನೆ ನಡೆದಿಲ್ಲ ಅಷ್ಟೇ. ಕುಂಭ ಮೇಳದಲ್ಲಿ ಕಾಲ್ತುಳಿತ ನಡೆದಾಗ ಯಾರಾದರೂ ರಾಜೀನಾಮೆ ನೀಡಿದ್ರಾ ಎಂದು ಮರು ಪ್ರಶ್ನೆ ಹಾಕಿದರು.
ಬಿಜೆಪಿಯವರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದರು. ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರೇ ವಿಕ್ಟರಿ ಯಾತ್ರೆಗೆ ಅನುಮತಿ ನೀಡಿಲ್ಲ ಯಾಕೆ ಎಂದು ಪೋಸ್ಟ್ ಹಾಕಿ ಈಗ ನಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.