ವಾಕಿಂಗ್ ಮುಗಿಸಿ ಮನೆಗೆ ಬಂದ DYSP ಹೃದಯಾಘಾತದಿಂದ ಸಾವು

Public TV
1 Min Read

ಚಿತ್ರದುರ್ಗ: ಪ್ರತಿದಿನದಂತೆ ಇಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದ ಡಿವೈಎಸ್‍ಪಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಡಿಸಿಆರ್ ಬಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ರಮೇಶ್(52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಾಕ್ ಮುಗಿಸಿ ಮನೆಗೆ ಬಂದ ರಮೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದರು. ಆಗ ತಕ್ಷಣ ಪೊಲೀಸರು ರಮೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವೇಶ್ವರ ಆಸ್ಪತ್ರೆಯಲ್ಲಿ ರಮೇಶ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಅಪ್ಪು ಸಾವಿನಿಂದ ಲೋಕ ಕಾಣುವ ಕನಸು ಮರೆತ ಅಂಧ ಸಹೋದರಿಯರು

1998 ಬ್ಯಾಚ್ ನಲ್ಲಿ ರಮೇಶ್ ಅವರು ಪೊಲೀಸ್ ಸೇವೆಗೆ ಸೇರಿದ್ದರು. ಆದರೆ ಇಂದು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರೋದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ವಿಚಾರ ತಿಳಿದ ಚಿತ್ರದುರ್ಗ ಎಸ್‍ಪಿ ಜಿ.ರಾಧಿಕಾ ಆಸ್ಪತ್ರೆಗೆ ಭೇಟಿ ನೀಡಿದ್ದು, ಇಲಾಖೆ ನಿಯಮ ಪ್ರಕಾರ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಕೋವಿಡ್-19 ಲಸಿಕೆ ಪಡೆದು 7.4 ಕೋಟಿ ರೂ. ಗೆದ್ದ ಯುವತಿ

ರಾಧಿಕಾ ಅವರು ರಮೇಶ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ಅವರೊಂದಿಗೆ ಡಿಆರ್ ಡಿವೈಎಸ್ ಪಿ.ತಿಪ್ಪೇಸ್ವಾಮಿ, ಡಿವೈಎಸ್‍ಪಿ ಪಾಂಡುರಂಗ ಹಾಗು ಪೊಲೀಸ್ ಅಧಿಕಾರಿಗಳಾದ ಗುಡ್ಡಪ್ಪ, ರಮೇಶ್ ಇತರರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *