ದಾಯಾದಿ ಕಲಹ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ, ಒಂದು ಕಾರು ಜಖಂ

Public TV
1 Min Read

ಬೆಂಗಳೂರು: ನಗರದ ಹೊರವಲಯ ನೆಲಮಂಗಲ ತಾಲೂಕಿನ ಹುಚ್ಚೇಗೌಡನ ಪಾಳ್ಯದಲ್ಲಿ ದಾಯಾದಿ ಕಲಹ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಮಾರಾಕಾಸ್ತ್ರಗಳಿಂದ ಹೊಡೆದಾಡಿಕೊಂಡಿವೆ.

ಮಂಗಳವಾರ ರಾತ್ರಿ ಸಿದ್ದರಾಜು ಎಂಬವರು ಮನೆಗೆ ನುಗ್ಗಿದ ಮುರಳಿ ಹಾಗು ತಿಮ್ಮರಾಜು ಕಡೆಯವರು ಎನ್ನಲಾದ ಇಪ್ಪತ್ತಕ್ಕೂ ಹೆಚ್ಚು ಜನರು ಮಾರಕಾಸ್ತ್ರಗಳಿಂದ ಮನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಒಡೆದು ಹಾಕಿದ್ದು, ಕಾರನ್ನು ಸಹ ಜಖಂಗೊಳಿಸಿದ್ದಾರೆ. ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.

ಗಲಾಟೆಯಲ್ಲಿ ಗಾಯಗೊಂಡವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದರಾಜು ಕುಟುಂಬಸ್ಥರು ತಮಗೆ ಜೀವ ಬೆದರಿಕೆಯಿದ್ದು, ನಮಗೆ ಸೂಕ್ತ ರಕ್ಷಣೆ ನೀಡಬೇಕೆಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತ ಮುರಳಿ ಎಂಬವರು ಸಹ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *