ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ

Public TV
1 Min Read

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಕುಲುವಿನ ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ್ದು ಭಾರೀ ಪ್ರವಾಹ ಉಂಟಾಗಿದೆ. ಈ ಬೆನ್ನಲ್ಲೇ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೈಅಲರ್ಟ್‌ ಘೋಷಿಸಲಾಗಿದೆ.

ವರದಿಗಳ ಪ್ರಕಾರ, ಭಾರೀ ಪ್ರವಾಹದಿಂದಾಗಿ ಪಾರ್ವತಿ ನದಿಯೂ ಉಕ್ಕಿ ಹರಿಯುತ್ತಿದೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಸದ್ಯಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿಲ್ಲ. ಪ್ರವಾಹ ಸೃಷ್ಟಿಯಾಗುತ್ತಿದ್ದಂತೆ ರಕ್ಷಣಾ ತಂಡಗಳನ್ನು ಕಾರ್ಯಾಚರಣೆಗೆ ಸಿದ್ಧವಾಗಿವೆ. ಇದನ್ನೂ ಓದಿ: ವಯನಾಡಿನಲ್ಲಿ ಭಾರೀ ಮಳೆ – ಕಾಡಿನೊಳಗೆ ಭೂಕುಸಿತದ ಆತಂಕ, 12 ಜಿಲ್ಲೆಗಳಿಗೆ ಅಲರ್ಟ್

ಅಲ್ಲದೇ, ಮುಂದಿನ 24 ಗಂಟೆಗಳ ಕಾಲ ಹಗುರಿಂದ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಗುಡ್ಡ ಪ್ರದೇಶಗಳತ್ತ ಸುಳಿಯದಂತೆ ಸ್ಥಳೀಯ ಆಡಳಿತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇನ್ನೊಬ್ಬಳೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಜಗಳ – ಬುರ್ಖಾ ಧರಿಸಿ ಬಂದು 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯ ಕೊಲೆ

ಉತ್ತರ ಭಾರತದಲ್ಲೂ ಭಾರೀ ಮಳೆ ಆಗ್ತಿದೆ. ಜಮ್ಮುವಿನ ರಾತ್ರಿ ಸುರಿದ ಭಾರೀ ಮಳೆಗೆ ತಾವಿ ನದಿ ಭೋರ್ಗರೆದಿದೆ. ಏಕಾಏಕಿ ನದಿ ನೀರಿನ ಮಟ್ಟ ಏರಿಕೆ ಆಗಿತ್ತು. ಪ್ರವಾಹದಲ್ಲಿ ಸಿಲುಕಿದ್ದ 9 ಜನರನ್ನ ಪೊಲೀಸರು-ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಇಡೀ ರಾತ್ರಿ ತಾವಿ ನದಿ ಸೇತುವೆ ಕೆಳಗೆ ನಿಂತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟವಾಗಿದೆ. ಭೀಕರ ಮಳೆಗೆ ಮನೆಗಳು ಕೊಚ್ಚಿ ಹೋಗಿದ್ದರೆ, ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ನದಿಗಳು ಅಬ್ಬರಿಸ್ತಿದ್ದು ಎಲ್ಲವನ್ನೂ ಆಪೋಶನ ಪಡೆದಿವೆ. ಮಣಿಕರಣ್-ಸೈಂಜ್-ಬಂಜರ್ ಕಣಿವೆಗಳು ದ್ವೀಪಗಳಾಗಿವೆ. ಕೇರಳದ ವಯನಾಡು ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗಿದೆ. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

Share This Article