ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ

Public TV
1 Min Read

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳು ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ಈ ವೇಳೆ ಬೊಮ್ಮಾಯಿ ಅವರು ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭಾರತ ಆಯೋಜಿಸಿದ್ದ, ಅಫ್ಘಾನಿಸ್ತಾನದ ಸಭೆಯಿಂದ ಹೊರಗುಳಿದ ಪಾಕಿಸ್ತಾನ, ಚೀನಾ 

ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಅವರು ಕನ್ನಡ ಸಂಸ್ಕøತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಾದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇನೆ: ಸಿದ್ದರಾಮಯ್ಯ

Share This Article
Leave a Comment

Leave a Reply

Your email address will not be published. Required fields are marked *