ಜ್ಯೋತಿರಾದಿತ್ಯ ಸಿಂಧಿಯಾರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

Public TV
1 Min Read

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ನಾಗರಿಕ ವಿಮಾನಯಾನ ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ದೆಹಲಿಯಲ್ಲಿ ಭೇಟಿ ಮಾಡಿರುವ ಸಿಎಂ, ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವರಾದ ವಿ.ಸುನೀಲ್ ಕುಮಾರ್, ಮುಖ್ಯಕಾರ್ಯದರ್ಶಿಗಳಾದ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ:  ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಟಾರ್ಗೆಟ್- ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಅನುಮಾನ

ಈಗಾಗಲೇ ದೆಹಲಿ ಪ್ರವಾಸದಲ್ಲಿರುವ ಬೊಮ್ಮಾಯಿ ಅವರಿಗೆ ಈಗ ಸಂಪುಟ ಸಂಕಟ ಶುರುವಾಗಿದೆ. ಸಂಪುಟ ವಿಸ್ತರಣೆಗಾಗಿ ಸಿಎಂ ಮೇಲೆ ಒತ್ತಡ ಹೆಚ್ಚಾಗ್ತಿದೆ. ನವೆಂಬರ್ ಅಥವಾ ಡಿಸೆಂಬರ್ ಗೆ ಸಂಪುಟ ವಿಸ್ತರಣೆಗೆ ಬೊಮ್ಮಾಯಿ ಅವರು ಯೋಚಿಸಿದ್ದು, ದೆಹಲಿ ನಾಯಕರ ಭೇಟಿ ವೇಳೆ ಸಂಪುಟ ವಿಸ್ತರಣೆ ಅನಿವಾರ್ಯತೆಗೆ ಬಗ್ಗೆ ಮನವರಿಕೆ ಮಾಡಿಕೊಡಲು ಯತ್ನಿಸಬಹುದು ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಹೈಕಮಾಂಡ್ ಒಪ್ಪಿಗೆ ಕೊಡುತ್ತಾ ಅಥವಾ ಆ ಕುರಿತು ಚರ್ಚಿಸಲು ಇನ್ನೊಂದು ಸಲ ದೆಹಲಿಗೆ ಬರುವಂತೆ ಸೂಚಿಸುತ್ತಾ ಕಾದು ನೋಡಬೇಕು. ಇದನ್ನೂ ಓದಿ:  ದೆಹಲಿ ಪ್ರವಾಸದಲ್ಲಿರೋ ಬೊಮ್ಮಾಯಿಗೆ ಸಂಪುಟ ಸಂಕಟ!

Share This Article
Leave a Comment

Leave a Reply

Your email address will not be published. Required fields are marked *