ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವೆ: ಸಿಎಂ

Public TV
1 Min Read

ಹುಬ್ಬಳ್ಳಿ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.

ಅಮರಗೋಳದಲ್ಲಿರುವ ಜಗಜ್ಯೋತಿ ಬಸವೇಶ್ವರ ಎಪಿಎಂಸಿಯಲ್ಲಿ ಆಯೋಜಿಸಲಾಗಿದ್ದ ಹುಬ್ಬಳ್ಳಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭವನ್ನು ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು. ಈ ವೇಳೆ, ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಗತವೈಭವ ಮರುಕಳಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ

ಶತಮಾನದಿಂದ ಈ ಸಂಸ್ಥೆಯನ್ನು ಉಳಿಸಿಕೊಂಡು ಬಂದಿದ್ದು, ರೈತರ ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ರೀತಿ ಮಾಡುವಂತೆ ತಿಳಿಸಿದರು. ಈ ಪ್ರತಿಷ್ಠಿತ ಸಂಸ್ಥೆ ರೈತರ ಆಸ್ತಿ. ಆ ಪ್ರತಿಷ್ಠೆಯನ್ನು ಮತ್ತು ರೈತ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ವಿಶೇಷ ಕಾಳಜಿ ಮತ್ತು ಮುತುವರ್ಜಿ ವಹಿಸಬೇಕು. ಇದರೊಂದಿಗೆ ನಾನು ಸಹ ಈ ಸಂಸ್ಥೆಯ ಜೊತೆ ಇರುವುದಾಗಿ ಹೇಳಿದರು.

ಒಬ್ಬ ವ್ಯಕ್ತಿ 100 ವರ್ಷ ಉಳಿಯಬಹುದು. ಆದರೆ ಒಂದು ಸಂಸ್ಥೆಯನ್ನು 100 ವರ್ಷ ಉಳಿಸಿಕೊಂಡು ಬರುವುದು ಬಹಳ ಕಷ್ಟ. ಇಂದಿನ ಖಾಸಗೀಕರಣ, ಜಾಗತೀಕರಣ ಹಾಗೂ ಆಧುನೀಕರಣದ ನಡುವೆಯೂ ಸಹಕಾರಿ ಸಂಸ್ಥೆಯನ್ನು ಉಳಿಸಿಕೊಂಡು ಬಂದಿರುವುದು ಪರಿಶ್ರಮದ ಪರಿಣಾಮ ಎಂದು ಪ್ರಶಂಸಿದರು.

ರೈತರ ವಿಷಯ ಬಂದಾಗ, ರೈತರ ಸಮಸ್ಯೆ ವಿಷಯ ಬಂದಾಗ ಬೇರೆಲ್ಲವನ್ನು ಮರೆತು ನಾವು ಒಗ್ಗಟಾಗಿ ಕೆಲಸ ಮಾಡೋಣ. ಸಂಸ್ಥೆ ಬೆಳೆದರೆ ರೈತರಿಗೆ ಅನುಕೂಲವಾಗುವುದು. ಸಂಸ್ಥೆಯಿಂದ ನಾವು-ನೀವೆಲ್ಲರೂ ಬೆಳೆದಿದ್ದೇವೆ. ರಾಜಕೀಯವಾಗಿಯೂ ಬೆಳೆದಿದ್ದೇವೆ. ಈ ಸಂಸ್ಥೆಯನ್ನು ಬೆಳೆಸಲು ನಾವು-ನೀವು ಮರಳಿ ಏನನ್ನಾದರೂ ನೀಡುವ ಚಿಂತನೆಯನ್ನು ಮಾಡಬೇಕಿದೆ ಎಂದರು. ಇದನ್ನೂ ಓದಿ: ಶ್ರೀಮಂತ ಬೇಡ, ಕಷ್ಟದಲ್ಲಿರುವವನ ಜೊತೆ ಡೇಟಿಂಗ್ ಮಾಡಲು ಇಷ್ಟ: ಹರ್ನಾಜ್ ಸಂಧು

ಇದು ನನ್ನ ಸಂಸ್ಥೆ. ಈ ಸಂಸ್ಥೆಗೆ ಸರ್ಕಾರದಿಂದ ನೀಡಬೇಕಾಗಿರುವ ಸಹಾಯ-ಸಹಕಾರವನ್ನು ನೀಡುತ್ತೇನೆ. ಈ ಕುರಿತು ಮುಂದಿನ ದಿನಗಳಲ್ಲಿ ಸಂಸ್ಥೆಯವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *