CM ಬಸವರಾಜ ಬೊಮ್ಮಾಯಿಗೆ ಮತ್ತೆ ಕೊರೊನಾ ಸೋಂಕು

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕತ್ತು, ಮರ್ಮಾಂಗ ಹಿಸುಕಿ ಕೊಲೆಗೈದು ದತ್ತುಮಗನ ಶವ ಚೀಲದಲ್ಲಿ ತುಂಬಿ ಕಥೆ ಕಟ್ಟಿದ್ಳು!

ಆಜಾದಿ ಕಾ ಅಮೃತ ಮಹೋತ್ಸವ ಕುರಿತ ಸಭೆ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದರು. ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಬೇಕಿತ್ತು. ಆಗಸ್ಟ್ 7ರಂದು ದೆಹಲಿಯಿಂದ ಹಿಂದಿರುಗಲು ಕಾರ್ಯಸೂಚಿ ನಿಗದಿಯಾಗಿತ್ತು. ಅಷ್ಟರಲ್ಲೇ ಕೊರೊನಾ ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ. ಇದನ್ನೂ ಓದಿ: ಕಾಮನ್‌ವೆಲ್ತ್ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಸುಧೀರ ಸಾಧನೆ – ಭಾರತಕ್ಕೆ ಚಿನ್ನದ ಹೊಳಪು


ಕಳೆದ ಜನವರಿ ತಿಂಗಳಿನಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ 2ನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *