ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ

Public TV
1 Min Read

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಗೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ಧನಿದ್ದೇನೆ ಎಂದು ಸಿಎಂ ಪತ್ರದಲ್ಲಿ ಭರವಸೆ ನೀಡಿದ್ದಾರೆ.

ಪಾದಯಾತ್ರೆಯನ್ನು ಮುಂದುವರೆಸುವುದನ್ನು ಕೈಬಿಟ್ಟು ನಾವೆಲ್ಲ ಈಗ ಕೊರೊನಾವನ್ನು ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅನಿವಾರ್ಯತೆ ಬಂದ್ರೆ ಮೇಕೆದಾಟು ಪಾದಯಾತ್ರೆ ನಿಲ್ಲಿಸಿ: ಕೈ ಹೈಕಮಾಂಡ್‌ ಸೂಚನೆ

ಬೊಮ್ಮಾಯಿ ಬರೆದ ಪತ್ರದಲ್ಲೇನಿದೆ?
ಸಿದ್ದರಾಮಯ್ಯನವರು, ವಿರೋಧಪಕ್ಷದ ನಾಯಕರು ಹಾಗೂ ಡಿ.ಕೆ.ಶಿವಕುಮಾರ್, ಕೆ.ಪಿ.ಸಿ.ಸಿ ಅಧ್ಯಕ್ಷರು ಇವರಿಗೆ,

ನಾನು ಮೇಕೆದಾಟು ಯೋಜನೆ ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ.

ಕೊರೊನಾ ಮಹಾಮಾರಿಯ 3ನೇ ಅಲೆ ತೀವ್ರವಾಗಿ ಅಪ್ಪಳಿಸಿದ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಸರಿಯಿರುವುದಿಲ್ಲ. ಈಗಾಗಲೇ ಮಾನ್ಯ ಉಚ್ಛನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದಂತಹ ಅಭಿಪ್ರಾಯ ನೀಡಿದೆ ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

ಹೀಗಾಗಿ ಪಾದಯಾತ್ರೆಯನ್ನು ಮುಂದುವರೆಸುವುದನ್ನು ಕೈಬಿಟ್ಟು ನಾವೆಲ್ಲ ಈಗ ಕೊರೊನಾವನ್ನು ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂಬ ಮನವಿಯನ್ನು ತಮ್ಮಲ್ಲಿ ಮಾಡುತ್ತೇನೆ.

– ಬಸವರಾಜ ಬೊಮ್ಮಾಯಿ

Share This Article
Leave a Comment

Leave a Reply

Your email address will not be published. Required fields are marked *