ಬಿಎಂಆರ್‌ಸಿಎಲ್‌ ಖಾತೆಗಾಗಿ ಸಿಎಂ ಎಚ್‍ಡಿಕೆ, ಡಿಸಿಎಂ ಪರಂ ನಡುವೆಯೇ ಹಗ್ಗಜಗ್ಗಾಟ!

Public TV
1 Min Read

ಬೆಂಗಳೂರು: ಸಾಂದರ್ಭಿಕ ಶಿಶು ಮೈತ್ರಿ ಸರ್ಕಾರದಲ್ಲಿ ಈಗ ಮತ್ತೊಂದು ಹೊಸ ರಾಗ ಆರಂಭವಾಗಿದೆ. ಸಚಿವ ಸ್ಥಾನ ಹಂಚಿಕೆ ಸಮಸ್ಯೆ ಇನ್ನು ಬಾಕಿ ಇರುವಂತೆ ಸಿಎಂ ಹಾಗೂ ಡಿಸಿಎಂ ಮಧ್ಯೆ ಖಾತೆ ಹಂಚಿಕೆಯಲ್ಲಿ ಮನಸ್ತಾಪ ಎದುರಾಗುತ್ತಿದೆಯಂತೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಡುವೆ ಖಾತೆ ಹಂಚಿಕೆಗಾಗಿ ಹಗ್ಗ ಜಗ್ಗಾಟ ಪ್ರಾರಂಭವಾಗಿದೆ. ನನಗೆ ಅದು ಬೇಕು, ಕೊಟ್ಟುಬಿಡಿ ಎಂದು ಪರಮೇಶ್ವರ್ ಅವರು ಪಟ್ಟು ಹಿಡಿದಿದ್ದಾರಂತೆ.

ಡಿಸಿಎಂ ಪರಮೇಶ್ವರ್ ಕೇಳಿದ್ದೇನು:
ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಪರಮೇಶ್ವರ್ ಅವರು ಸದ್ಯ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಟ್ (ಬಿಎಂಆರ್ ಸಿಎಲ್) ಖಾತೆಯೂ ಬೇಕೆಂದು ಪಟ್ಟು ಹಿಡಿದಿದ್ದಾರೆ. ನಾನು ಈಗಾಗಲೇ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವೆ. ಹೀಗಾಗಿ ಬಿಎಂಆರ್ ಸಿಎಲ್ ಖಾತೆ ನನ್ನ ಬಳಿಯೇ ಇದ್ದರೆ, ಅಭಿವೃದ್ಧಿ ಕಾರ್ಯ ಸಾಧ್ಯವಾಗುತ್ತದೆ ಎಂದು ಹೊಸ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಇತ್ತ ಜಿ.ಪರಮೇಶ್ವರ್ ಅವರ ಬೇಡಿಕೆಯನ್ನು ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ದೂರ ತಳ್ಳುತ್ತಿದ್ದಾರೆ. ಈ ಮೂಲಕ ಇಬ್ಬರ ನಡುವೆ ಹಗ್ಗಜಗ್ಗಾಟ ಪ್ರಾರಂಭವಾಗಿದ್ದು, ಸಮಸ್ಯೆ ಮಾಜಿ ಪ್ರದಾಣಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ಬಳಿಗೆ ಹೋಗುವ ಸಾಧ್ಯತೆಗಳಿವೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *