ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು

Public TV
1 Min Read

ಬೆಂಗಳೂರು: ರಾಜ್ಯದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಕೇಂದ್ರ ವಿಮಾನಯಾನ ಇಲಾಖೆಗೆ ಸಿಎಂ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿರುವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿರುವ ಸಿಎಂ ಕುಮಾರಸ್ವಾಮಿ ಅವರು, ಶಿಫಾರಸ್ಸು ಮಾಡಿರುವ ಹೆಸರು ನಾಮಕರಣ ಮಾಡಲು ಮನವಿ ಮಾಡಿದ್ದಾರೆ.

ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾಗಿ ನಾಡಿನ ಜನತೆಯ ಮನಸ್ಸಿನಲ್ಲಿ ಸ್ಥಾನ ಪಡೆದಿದ್ದು, ಆದ್ದರಿಂದ ಈ ಹೆಸರುಗಳನ್ನೇ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *