ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

Public TV
1 Min Read

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಡಿಜಿ ನೀಲಮಣಿರಾಜು ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕುಮಾರಸ್ವಾಮಿ ಮನೆಗೆ ಡಿಜಿ ನೀಲಮಣಿರಾಜು ಭೇಟಿ ನೀಡಿ ಚರ್ಚೆ ನಡೆಸಿದ್ದು, ಭದ್ರತೆಯ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಿಎಂ ಅವರು, ಯಾವುದೇ ಕಾರಣಕ್ಕೂ ಬಹುಮತ ಸಾಬೀತುಪಡಿಸುವ ಸಮಯದಲ್ಲಿ ಗೊಂದಲ, ಗಲಾಟೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

ಶಾಸಕರು ವಿಧಾನಸೌಧಕ್ಕೆ ಬರುವ ಸಮಯದಲ್ಲಿ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ ಡಿಜಿ ನೀಲಮಣಿ ರಾಜು ಹೊರಟ ಬಳಿಕ ಇಂಟಲಿಜೆನ್ಸ್ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರ ಬಳಿಯೂ ಸಿಎಂ ಮಾಹಿತಿ ಪಡೆದಿದ್ದಾರೆ.

ಸದ್ಯ ವಿಧಾನಸೌಧದ ಸುತ್ತಾಮುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *