ಚುನಾವಣೆ ಬಳಿಕ ಇವ್ರೆಲ್ಲಾ ಎಲ್ಲಿರ್ತಾರೆ ನೋಡ್ಬೇಕು – ಹೆಗ್ಡೆಗೆ ಎಚ್‍ಡಿಕೆ ಟಾಂಗ್

Public TV
1 Min Read

ಕಾರವಾರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಬಹುಮತದಿಂದ ಗೆಲುವು ಸಾಧಿಸುತ್ತಾನೆ. ಈಗ ಎಲ್ಲಿದ್ದೀಯಪ್ಪಾ ಆನಂದ್ ಎಂದು ಟ್ರೋಲ್ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಇವರೆಲ್ಲಾ ಎಲ್ಲಿರ್ತಾರೆ ನೋಡಬೇಕು ಎಂದು ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ರು.

ಕುಮುಟಾದಲ್ಲಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಪರ ಗುರುವಾರ ಪ್ರಚಾರ ನಡೆಸಿದ ಸಿಎಂ ಕುಮಾರಸ್ವಾಮಿ, ಅನಂತ್‍ಕುಮಾರ್ ಹೆಗ್ಡೆ ವಿರುದ್ಧ ವಾಗ್ದಾಳಿ ನಡೆಸಿದ್ರು.

ಹಿಂದೂ ಧರ್ಮವನ್ನ ಉಳಿಸುವವನು ನಾನೇ ಎಂದು ಹೇಳುವ ವ್ಯಕ್ತಿ ಅನಂತ್ ಕುಮಾರ್, ದೇವಸ್ಥಾನಕ್ಕೆ ಹೋದಾಗ ನಿಂಬೆಹಣ್ಣು ಕೊಡ್ತಾರೆಂದ್ರು. ಏ.18ರ ನಂತರ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳುತ್ತಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸುತ್ತಾನೆ. ಈಗ ಎಲ್ಲಿದ್ದೀಯಪ್ಪಾ ಆನಂದ್ ಎಂದು ಟ್ರೋಲ್ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಇವರೆಲ್ಲಾ ಎಲ್ಲಿರ್ತಾರೆ ನೋಡಬೇಕು. ಮೇ.23ರ ನಂತರ ಎಲ್ಲಿದ್ದೀಯಪ್ಪಾ ಅನಂತ್‍ಕುಮಾರ್ ಎಂದು ಕೇಳಬೇಕಾಗುತ್ತದೆ ಎಂದು ಅನಂತ್‍ಕುಮಾರ್ ಹೇಳಿಕೆಗೆ ಟಾಂಗ್ ನೀಡಿದರು.

ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎಂದು ಇದೇ ವೇಳೆ ಎಚ್‍ಡಿಕೆ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮಗಳಲ್ಲಿ ಕೇವಲ ಸುಮಲತಾ, ಮಂಡ್ಯವನ್ನ ಮಾತ್ರ ತೋರಿಸುತ್ತಿದ್ದಾರೆ. ಹೀಗಾಗಿ ಕಳೆದೆರಡು ತಿಂಗಳಿನಿಂದ ನರೇಂದ್ರ ಮೋದಿ ಕಳೆದು ಹೋಗಿದ್ದಾರೆ. ಬಿಜೆಪಿಯವರು ಮೋದಿ ಫೋಟೋ ಇಟ್ಟುಕೊಂಡು ಮತ ಕೇಳಲು ಹೋಗಬೇಕು ಎಂದು ಗರಂ ಆದ್ರು.

 

Share This Article
Leave a Comment

Leave a Reply

Your email address will not be published. Required fields are marked *