ಎಚ್‍ಡಿಕೆ ಎರಡು ನಾಲಗೆಯ ಸಿಎಂ: ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ

Public TV
1 Min Read

ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ನಾಲಗೆಯ ಸಿಎಂ ಎಂದು ಕಾಂಗ್ರೆಸ್ ಮಾಜಿ ಶಾಸಕ ಹಾಗು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಸಮಾಧಾನ ಹೊರ ಹಾಕಿದ್ದಾರೆ.

ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಹೇಳುವುದು ಒಂದು ಮಾಡುವುದು ಇನ್ನೊಂದು. ಮೊದಲಿಗೆ ರೈತರ ಸಂಪೂರ್ಣ ಸಾಲಮನ್ನಾ ಎಂದು ಹೇಳಿದರು. ಈಗ ರೈತರ ಸಾಲಮನ್ನಾ ಎನ್ನುವುದು ಕನ್ನಡಿಯೊಳಗಿನ ಕಗ್ಗಾಂಟಾಗಿದೆ. ಸಾಲಮನ್ನಾವು ದೊಡ್ಡ ದೊಡ್ಡ ಎಸ್ಟೇಟ್ ಹೊಂದಿರುವ ಉದ್ಯಮಿಗಳಿಗೆ ವರದಾನವಾಗಲಿದೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಬಜೆಟ್‍ಗೆ ದೋಸ್ತಿಗಳಿಂದಲೇ ಟೀಕೆ: ಸಿಎಂ ಸುತ್ತುವರಿದು ಬೇಡಿಕೆ ಮಂಡನೆ

ಬಜೆಟ್‍ನಲ್ಲಿ ತುಮಕೂರು ಜಿಲ್ಲೆಯನ್ನು ಕಡೆಗಣಿಸಲಾಗಿದ್ದು, ಈ ಹಿಂದೆ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿತ್ತು. ಆದ್ರೆ ಸಿಎಂ ಈ ಬಾರಿ ಬಜೆಟ್ ನಲ್ಲಿ ಕಾಲೇಜಿನ ಬಗ್ಗೆ ಪ್ರಸ್ತಾಪಿಸದೇ ಮೋಸ ಮಾಡಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರ ಕೆಲ ಯೋಜನೆಗೆ ಕತ್ತರಿ ಹಾಕಿದ್ದು, ಅನ್ನ ಭಾಗ್ಯ ಯೋಜನೆಯಲ್ಲಿ 2 ಕೆ.ಜಿ. ಅಕ್ಕಿಯನ್ನು ಕಡಿಮೆ ಮಾಡುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಮ್ದು ಮೂರ್ನಾಲ್ಕು ಜಿಲ್ಲೆ ಬಜೆಟ್ ಅಲ್ಲ, ಅರ್ಥ ಮಾಡಿಕೊಳ್ಳದವ್ರಿಗೆ ಏನ್ ಹೇಳೋಕೆ ಸಾಧ್ಯ: ಬಿಜೆಪಿಗೆ ಸಿಎಂ ತಿರುಗೇಟು

ನಮ್ಮ ಜಿಲ್ಲೆಗೆ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಯೋಜನೆಗಳನ್ನು ಎಚ್‍ಡಿಕೆ ಮುಂದುವರಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಲ್ಲೂ ಮೋಸ ಮಾಡಲಾಗಿದೆ. ಡೀಸೆಲ್, ಪೆಟ್ರೋಲ್ ಮತ್ತು ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹೇರಿದ್ದಾರೆ ಎಂದು ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share This Article
1 Comment

Leave a Reply

Your email address will not be published. Required fields are marked *