ಮಂಜು ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ: ಸಿಎಂ ತಿರುಗೇಟು

Public TV
1 Min Read

– ಇಂಥ ಗಿಮಿಕ್‍ಗಳು ಹಾಸನದಲ್ಲಿ ಎಲ್ಲಿ ನಡೆಯುತ್ತೆ ಹೇಳಿ

ಮೈಸೂರು: ಪೌರಕಾರ್ಮಿಕರಿಗೆ ಹಾಸನದಲ್ಲಿ ಮಾಜಿ ಸಚಿವ ಎ.ಮಂಜು ಪಾದ ಪೂಜೆ ಮಾಡಿದ ವಿಚಾರದ ಬಗ್ಗೆ ಮೈಸೂರಿನಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪಾದ ಪೂಜೆ ಮಾಡಿದ ತಕ್ಷಣ ಅವರ ಪಾಪ ಎಲ್ಲಾ ತೊಳೆದು ಹೋಗುತ್ತಾ?. ಎ. ಮಂಜು ಅವರ ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ. ಇಂತಹ ಗಿಮಿಕ್‍ಗಳು ಹಾಸನದಲ್ಲಿ ಎಲ್ಲಿ ನಡೆಯುತ್ತೆ ಹೇಳಿ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮೋದಿ ಯಾರಿಗೋ ಪೌರಕಾರ್ಮಿಕರ ಡ್ರೆಸ್ ಹಾಕಿ ಪಾದ ಪೂಜೆ ಮಾಡಿದ್ದರು. ಮಂಜು ಇನ್ಯಾರಿಗೆ ಪೌರಕಾರ್ಮಿಕರ ಡ್ರೆಸ್ ಹಾಕಿ ಪಾದ ಪೂಜೆ ಮಾಡಿದ್ದಾರೋ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಎ. ಮಂಜು ಅವರು ಇಂದು ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ, ಪೌರಕಾರ್ಮಿಕ ದಂಪತಿಯ ಪಾದ ತೊಳೆದು ಪೂಜೆ ಮಾಡಿ ಮೋದಿ ಅವರನ್ನು ಫಾಲೋ ಮಾಡಿದ್ದರು.

ಹಾಸನದ ನಿರ್ಮಾಲ ನಗರದಲ್ಲಿ ಚಂದ್ರು ಹಾಗೂ ಅಶ್ವಿನಿ ದಂಪತಿಯ ಕಾಲು ತೊಳೆದು ಎ.ಮಂಜು ಪೂಜೆ ಮಾಡಿದ್ದಾರೆ. ಪಾದ ತೊಳೆದ ನಂತರ, ನಾವು ಪೌರಕಾರ್ಮಿಕರ ಪಾದ ತೊಳೆದಿದ್ದ ಮೋದಿಯನ್ನು ಟಿವಿಯಲ್ಲಿ ಮಾತ್ರ ನೊಡಿದ್ದೇವು. ಅದರೇ ಇಂದು ಎ.ಮಂಜು ನಮ್ಮ ಮನೆಗೆ ಬಂದು ನಮ್ಮ ಪಾದ ತೊಳೆದಿದ್ದಾರೆ. ಮೊದಲು ಸ್ವಲ್ಪ ಮುಜುಗರವಾದರೂ ನಂತರ ಸಂತೋಷವಾಯಿತು ಎಂದ ಚಂದ್ರು ದಂಪತಿ ಪ್ರತಿಕ್ರಿಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *