ವಿದೇಶ ಪ್ರವಾಸ ಮುಗಿಸಿ ವಾಪಾಸ್ಸಾದ ಸಿಎಂ- ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಣೆ

Public TV
1 Min Read

ಚಿಕ್ಕಬಳ್ಳಾಪುರ: ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರ್ ಜೊತೆ ವಿದೇಶ ಪ್ರವಾಸ ಕೈಗೊಂಡಿದ್ದ ಸಿಎಂ ಕುಮಾರಸ್ವಾಮಿ ಇಂದು ರಾಜ್ಯಕ್ಕೆ ಮರಳಿದ್ದಾರೆ.

5 ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿ ಇಂದು ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದು, ಬೆಳಗ್ಗೆ 9 ಗಂಟೆಗೆ ದುಬೈನಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರ್ ಜೊತೆ ವಾಪಾಸ್ಸಾದ ಸಿಎಂ ಬೆಂಗಳೂರಿನತ್ತ ಪಯಣ ಬೆಳೆಸಿದ್ದಾರೆ.

ಇದಕ್ಕೂ ಮುನ್ನ ವಿವಿಐಪಿ ಟರ್ಮಿನಲ್ ಮೂಲಕ ಹೊರ ಬಂದ ಸಿಎಂಗೆ ಸ್ಥಳೀಯ ಜೆಡಿಎಸ್ ಮುಖಂಡರು ಪುಷ್ಫಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಲು ಸಿಎಂ ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *