ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

Public TV
1 Min Read

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪು ವಂಶಸ್ಥೆ ಎಂದು ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಂಸದ ಸಾಕ್ಷಿ ಮಹಾರಾಜ್, ಈ ಹಿಂದೆ ಹಿರಣ್ಯ ಕಶಿಪು ಎಂಬ ರಾಕ್ಷಸನಿದ್ದ. ಜೈ ಶ್ರೀರಾಮ್ ಎಂದು ಜಪಿಸುತ್ತಿದ್ದ ಪುತ್ರನನ್ನು ಜೈಲಿನಲ್ಲಿ ಇರಿಸಿದ್ದ. ಇಂದು ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಎಂದು ಹೇಳುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪುವಿನ ವಂಶಸ್ಥರು ಇರಬಹುದು ಎನ್ನುವುದು ನನ್ನ ಅನಿಸಿಕೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಸಿಎಂ ಮಮತಾ ಬ್ಯಾನರ್ಜಿ ಮಾರ್ಗ ಮಧ್ಯೆ ಕೆಲ ಯುವಕರು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಕಾರಿನಿಂದ ಹೊರ ಬಂದ ಸಿಎಂ, ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ತೃಣಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಶಾಸಕ ಅರ್ಜುನ್ ಸಿಂಗ್, ಟಿಎಂಸಿಯ ಸಭೆಯ ವೇಳೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆ ಖಂಡಿಸಿ ದೀದಿ ನಿವಾಸಕ್ಕೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡುಗಳನ್ನು ಬಿಜೆಪಿ ನಾಯಕರು ಕಳುಹಿಸಲಿದ್ದೇನೆ ಎಂದು ಹೇಳಿದ್ದಾರೆ.

ಹಿರಣ್ಯ ಕಶಿಪು ಯಾರು?
ವಿಷ್ಣು ಪುರಾಣದಲ್ಲಿ ಬರುವ ಹಿರಣ್ಯ ಕಶಿಪು ಹಿರಣ್ಯಾಕ್ಷನ ಅಣ್ಣ. ಪ್ರಹ್ಲಾದನ ತಂದೆ, ಕಯಾದುವಿ ಪತಿ. ತಪಸ್ಸು ಮಾಡಿದ್ದ ಈತ ಅಮರತ್ವ ವರವನ್ನು ಕೊಡುವಂತೆ ಬ್ರಹ್ಮನಲ್ಲಿ ಕೇಳಿದ್ದ. ಅಮರತ್ವದ ವರ ನೀಡಲು ಸಾಧ್ಯವಿಲ್ಲ ಎಂದು ಬ್ರಹ್ಮ ಹೇಳಿದ್ದಕ್ಕೆ, ನನಗೆ ಮನುಷ್ಯನಿಂದ, ಪ್ರಾಣಿಗಳಿಂದ, ದೇವತೆಗಳಿಂದ, ಭೂ, ಜಲ, ವಾಯು ಮತ್ತು ಯಾವುದೇ ಆಯುಧಗಳಿಂದಲೂ ಮರಣ ಸಂಭವಿಸದೇ ಇರುವ ವರವನ್ನು ಕೇಳಿ ಪಡೆದುಕೊಂಡಿದ್ದ. ಕೊನೆಗೆ ವಿಷ್ಣು ಅರ್ಧ ಮಾನವ ಅರ್ಧ ಸಿಂಹ ಹೀಗೆ ನರಸಿಂಹ ಅವತಾರದಲ್ಲಿ ಬಂದು ಶಿವನ ಆರಾಧಕನಾಗಿದ್ದ ಹಿರಣ್ಯ ಕಶಿಪುವನ್ನು ಸಂಹಾರ ಮಾಡಿದ್ದ.

Share This Article
Leave a Comment

Leave a Reply

Your email address will not be published. Required fields are marked *