ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
1 Min Read

ಬೆಂಗಳೂರು: ಬಿಎಸ್ ಯಡಿಯೂರಪ್ಪ (BS Yediyurappa) ಮೊಮ್ಮಗ, ಬಿವೈ ರಾಘವೇಂದ್ರ (BY Raghavendra) ಪುತ್ರ ಸುಭಾಷ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಆರತಕ್ಷತೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು. ಶಾಲಿನಿ ರಜನೀಶ್ ಅವರಿಗೆ ರಾಘವೇಂದ್ರ ಪತ್ನಿ ಶಾಲು ಹೊದಿಸಿ ಸ್ವಾಗತಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್‌ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ಭಾನುವಾರ ವರಿಸಲಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

Share This Article